ಮೊದಲ ದಿನ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಭಕ್ತ ಸಮೂಹ ಹೆಚ್ಚಾಗಿತ್ತು. ಆದರೆ ಮಂಗಳವಾರ ಈ ಪ್ರಮಾಣ ಸ್ವಲ್ಪ ಕಡಿಮೆಯಾಗಿತ್ತು.
ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಗಳಲ್ಲಿ ಎರಡನೇ ದಿನ ಆಗಮಿಸಿದ ಭಕ್ತರಲ್ಲಿ ಉತ್ಸಾಹಕ್ಕೆ ಕೊರತೆ ಇರಲಿಲ್ಲ. ಭಕ್ತರಿಗೆ ಥರ್ಮಲ್ ಟೆಸ್ಟ್ ಮಾಡಿಸಿಯೇ ಒಳಗೆ ಬಿಡಲಾಗುತ್ತಿತ್ತು.
ಕೊರೋನಾ ಮಹಾಮಾರಿಯನ್ನು ದೇವರೆ ತೊಲಗಿಸಬೇಕಷ್ಟೆಎಂದು ಪ್ರತ್ಯೇಕವಾಗಿ ಪ್ರಾರ್ಥಿಸುತ್ತಿದ್ದರು ಎಂದು ದೇವಾಲಯದ ಮೂಲಗಳು ತಿಳಿಸಿವೆ.
ಭಕ್ತರಿಗೆ ದೇವಾಯಲ ಪ್ರವೇಶಿಸುವಾಗ ಸ್ಯಾನಿಟೈಸರ್ ನೀಡುತ್ತಿರುವುದು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ 2194 ಮಂದಿ ದೇವರ ದರ್ಶನ ಮಾಡಿದ್ದಾರೆ. ಮಂಗಳವಾರವೂ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿತ್ತು.
ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನೂ ಮಾಡಲಾಗಿತ್ತು.
77 ದಿನಗಳ ಬಳಿಕ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ, ಎರಡನೆ ದಿನವೂ ನಿರೀಕ್ಷೆಯ ಸಂಖ್ಯೆಯಲ್ಲಿ ಭಕ್ತರು ಬಂದಿರಲಿಲ್ಲ.
ಶುಕ್ರವಾರ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು, ಆಡಳಿತ ಮಂಡಳಿ ಎಲ್ಲಾ ರೀತಿಯ ಪೂರ್ವ ತಯಾರಿಯನ್ನು ಮಾಡಿಕೊಂಡಿದೆ.
ಮಂಗಳವಾರ ದರ್ಶನ ಪಡೆದವರಲ್ಲಿ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ಕಾಣಿಸಲಿಲ್ಲ.
Suvarna News