BSYಗೆ ಕೊರೋನಾ: ಶೀಘ್ರ ಗುಣಮುಖರಾಗಲು ಸಂಸದ ಬಿ. ವೈ. ರಾಘವೇಂದ್ರರಿಂದ ವಿಶೇಷ ಪೂಜೆ
First Published Aug 3, 2020, 2:16 PM ISTಶಿವಮೊಗ್ಗ(ಆ.03): ಡೆಡ್ಲಿ ಕೊರೋನಾ ವೈರಸ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೂ ಅಂಟಿದೆ. ಸಿಎಂ ಯಡಿಯೂರಪ್ಪ ಅವರಿಗೆ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಬಿಎಸ್ವೈ ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಪುತ್ರ ಹಾಗೂ ಸಂಸದ ಬಿ. ವೈ. ರಾಘವೇಂದ್ರ ಅವರು ಭಗವಂತನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.