ಮೈಸೂರಿನ ಜಯಚಾಮರಾಜೇಂದ್ರ ಝೂ ಓಪನ್: ಬಿಳಿ ಹುಲಿ ಮಿಸ್ ಮಾಡ್ಕೋಬೇಡಿ

Published : Jun 08, 2020, 04:25 PM IST

ಕೊರೋನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 86 ದಿನ ಬಂದ್‌ ಆಗಿದ್ದ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ಸೇರಿದಂತೆ ರಾಜ್ಯದ 9 ಮೃಗಾಲಯ ಜೂ. 8ರಿಂದ ಪುನಾರಂಭವಾಗಲಿವೆ. ಸಕಲ ಮುಂಜಾಗ್ರತೆ ಕ್ರಮಗಳೊಂದಿಗೆ ಝೂಗೆ ಆಗಮಿಸುವ ಪ್ರವಾಸಿಗರನ್ನು ಸ್ವಾಗತಿಸಲು ಮೃಗಾಲಯದ ಆಡಳಿತ ಮಂಡಳಿ ಸಜ್ಜಾಗಿದೆ. ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 50 ಮಂದಿಗೆ ಟಿಕೆಟ್ ಪಡೆಯುವ ಮೂಲಕ ಇಂದು ಪ್ರವೇಶಕ್ಕೆ ಚಾಲನೆ ನೀಡಲಾಯಿತು.

PREV
18
ಮೈಸೂರಿನ ಜಯಚಾಮರಾಜೇಂದ್ರ ಝೂ ಓಪನ್: ಬಿಳಿ ಹುಲಿ ಮಿಸ್ ಮಾಡ್ಕೋಬೇಡಿ

3 ತಿಂಗಳ ಬಳಿಕ ಮೈಸೂರು  ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭವಾಗಿದ್ದು, ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಚಾಲನೆ ನೀಡಿದರು.

3 ತಿಂಗಳ ಬಳಿಕ ಮೈಸೂರು  ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭವಾಗಿದ್ದು, ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಚಾಲನೆ ನೀಡಿದರು.

28

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಷ್ ರವರು,ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ಮೃಗಾಲಯ ಪುನಾರಂಭಕ್ಕೆ ಚಾಲನೆ ನೀಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಷ್ ರವರು,ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ಮೃಗಾಲಯ ಪುನಾರಂಭಕ್ಕೆ ಚಾಲನೆ ನೀಡಿದರು.

38

ಈಚೆಗೆ ಜನಿಸಿದ ಜಿರಾಫೆ ಮರಿಗಳಿಗೆ ಇದೇ ವೇಳೆ ಆದ್ಯ ಯಧುವೀರ ಹಾಗೂ ಬಾಲಾಜಿ ಎಂದು ನಾಮಕರಣ ಮಾಡಲಾಯಿತು.

ಈಚೆಗೆ ಜನಿಸಿದ ಜಿರಾಫೆ ಮರಿಗಳಿಗೆ ಇದೇ ವೇಳೆ ಆದ್ಯ ಯಧುವೀರ ಹಾಗೂ ಬಾಲಾಜಿ ಎಂದು ನಾಮಕರಣ ಮಾಡಲಾಯಿತು.

48

ಅಪರೂಪದ ತಳಿಯಾಗಿರುವ ಬಿಳಿ ಹುಲಿ ಸಂಚರಿಸಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಎನ್ಕ್ಲೂಶರ್ ಅನ್ನು ಹಸಿರು ಬಾವುಟ ತೋರ್ಪಡಿಸುವ ಮೂಲಕ ಅನಾವರಣಗೊಳಿಸಲಾಯಿತು. ಇಲ್ಲಿ ಪ್ರಸ್ತುತ ಸಾರಾ ಎಂಬ ಹೆಣ್ಣು ಬಿಳಿ ಹುಲಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅಪರೂಪದ ತಳಿಯಾಗಿರುವ ಬಿಳಿ ಹುಲಿ ಸಂಚರಿಸಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಎನ್ಕ್ಲೂಶರ್ ಅನ್ನು ಹಸಿರು ಬಾವುಟ ತೋರ್ಪಡಿಸುವ ಮೂಲಕ ಅನಾವರಣಗೊಳಿಸಲಾಯಿತು. ಇಲ್ಲಿ ಪ್ರಸ್ತುತ ಸಾರಾ ಎಂಬ ಹೆಣ್ಣು ಬಿಳಿ ಹುಲಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

58

Chamarajendra zoo 

Chamarajendra zoo 

68

ಮೈಸೂರು ಮೂಲದ ಮೂವರು ನಟರಿಗೆ ಗೌರವ ಸೂಚಿಸಲು ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹವನ್ನು ವೈಯಕ್ತಿಕವಾಗಿ ದತ್ತು ಪಡೆದುಕೊಂಡೆವು ಎಂದರು.

ಮೈಸೂರು ಮೂಲದ ಮೂವರು ನಟರಿಗೆ ಗೌರವ ಸೂಚಿಸಲು ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹವನ್ನು ವೈಯಕ್ತಿಕವಾಗಿ ದತ್ತು ಪಡೆದುಕೊಂಡೆವು ಎಂದರು.

78

ಅಮೆರಿಕದ ಅಕ್ಕ ಸಂಸ್ಥೆಯಿಂದ ಮೃಗಾಲಯದ ನಿರ್ವಹಣೆಗೆಂದು 40 ಲಕ್ಷ ರೂಪಾಯಿ ಚೆಕ್ ಅನ್ನು ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಅವರು ಇಂದು ಮೃಗಾಲಯಕ್ಕೆ ಹಸ್ತಾಂತರಿಸಿದರು.

ಅಮೆರಿಕದ ಅಕ್ಕ ಸಂಸ್ಥೆಯಿಂದ ಮೃಗಾಲಯದ ನಿರ್ವಹಣೆಗೆಂದು 40 ಲಕ್ಷ ರೂಪಾಯಿ ಚೆಕ್ ಅನ್ನು ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಅವರು ಇಂದು ಮೃಗಾಲಯಕ್ಕೆ ಹಸ್ತಾಂತರಿಸಿದರು.

88

ನಮ್ಮೊಂದಿಗೆ ಸಂಸದರಾದ ಸುಮಲತಾ ಅಂಬರೀಷ್ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಶಾಸಕರಾದ ಎಸ್.ಎ ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮೊಂದಿಗೆ ಸಂಸದರಾದ ಸುಮಲತಾ ಅಂಬರೀಷ್ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಶಾಸಕರಾದ ಎಸ್.ಎ ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

click me!

Recommended Stories