Mysuru: ವೈದ್ಯರಿಲ್ಲದೆ ಒಂದೇ ದಿನ ಜಯದೇವ ಆಸ್ಪತ್ರೆಯಲ್ಲಿ 11 ರೋಗಿಗಳ ಸಾವು, ಸಾರ್ವಜನಿಕರ ಆರೋಪ

Published : Jun 17, 2026, 12:11 PM ISTUpdated : Jun 17, 2026, 12:25 PM IST

ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆರೋಪಿಸಿ ಗಲಾಟೆ ಮಾಡಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ ಈ ಆರೋಪವನ್ನು ನಿರಾಕರಿಸಿದ್ದಾರೆ.

PREV
17
ಒಂದೇ ದಿನ 11 ರೋಗಿಗಳ ಸಾವು; ಆಸ್ಪತ್ರೆಯಲ್ಲಿ ರೋಗಿ ಸಂಬಂಧಿಗಳ ಗಲಾಟೆ

ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಿನೇ ದಿನೆ ರೋಗಿಗಳ ಸಾವು ಹೆಚ್ಚಾಗುತ್ತಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 11 ರೋಗಿಗಳು ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ರೋಗಿಗಳ ಸಂಬಂಧಿಕರು ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಮತ್ತು ಆಸ್ಪತ್ರೆಯಲ್ಲಿ ವೈದ್ಯರೇ ಇರಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಸಂಬಂಧಿಕರು ವೈದ್ಯರನ್ನು ತಕ್ಷಣ ಕರೆಸುವಂತೆ ಗಲಾಟೆ ಮಾಡಿದ್ದಲ್ಲದೆ, "ಇಷ್ಟೊಂದು ದೊಡ್ಡ ಆಸ್ಪತ್ರೆಯಲ್ಲಿ ಒಬ್ಬರೂ ಡಾಕ್ಟರ್ ಇಲ್ವಾ?" ಎಂದು ಕೂಗಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ತಕ್ಷಣ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

27
ವೈದ್ಯರ ನಿರ್ಲಕ್ಷ್ಯದ ಆರೋಪ ಸತ್ಯಕ್ಕೆ ದೂರ ಎಂದ ಆಸ್ಪತ್ರೆ ಅಧೀಕ್ಷಕರು

ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂಬ ಸಾರ್ವಜನಿಕರ ಆರೋಪದ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಜಯದೇವ ಆಸ್ಪತ್ರೆಯ ಅಧೀಕ್ಷಕರಾದ ಡಾ. ಸದಾನಂದ ಅವರು ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. "ವೈದ್ಯರ ನಿರ್ಲಕ್ಷ್ಯದಿಂದ ಸಾವುಗಳಾಗಿವೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ನಿಜ, ಆದರೆ ಚಿಕಿತ್ಸೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸಿಲ್ಲ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

37
ಐದು ಜಿಲ್ಲೆಗಳ ರೋಗಿಗಳಿಗೆ ಆಸರೆ; ಕೊನೆಯ ಕ್ಷಣದಲ್ಲಿ ಬರುವ ಗಂಭೀರ ಪ್ರಕರಣಗಳು

ಆಸ್ಪತ್ರೆಯ ಸ್ಥಿತಿಗತಿಯ ಬಗ್ಗೆ ವಿವರಿಸಿದ ಡಾ. ಸದಾನಂದ, "ನಮ್ಮ ಆಸ್ಪತ್ರೆಗೆ ಕೇವಲ ಮೈಸೂರಷ್ಟೇ ಅಲ್ಲದೆ ಸುತ್ತಮುತ್ತಲಿನ ಐದು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಸಾಮಾನ್ಯ ಹೃದ್ರೋಗ ಪ್ರಕರಣಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಸಿಗುತ್ತದೆ. ಆದರೆ, ಪರಿಸ್ಥಿತಿ ಅತ್ಯಂತ ಗಂಭೀರವಾದಾಗ ಮಾತ್ರ ರೋಗಿಗಳನ್ನು ನಮ್ಮ ಆಸ್ಪತ್ರೆಗೆ ಕರೆತರಲಾಗುತ್ತದೆ. ನಿನ್ನೆ ಮೃತಪಟ್ಟ 11 ರೋಗಿಗಳು ಕೂಡ ಆಸ್ಪತ್ರೆಗೆ ದಾಖಲಾಗುವ ವೇಳೆಯಲ್ಲೇ ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದರು" ಎಂದು ತಿಳಿಸಿದ್ದಾರೆ.

47
ಮೃತಪಟ್ಟವರೆಲ್ಲಾ ತೀವ್ರ ಹೃದಯಾಘಾತ ಹಾಗೂ ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದವರು

ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಬುಧವಾರ ಬೆಳಿಗ್ಗೆ 8 ಗಂಟೆಯವರೆಗಿನ 24 ಗಂಟೆಗಳ ಅವಧಿಯಲ್ಲಿ 11 ಮಂದಿ ಮೃತಪಟ್ಟಿರುವುದು ನಿಜ ಎಂದು ಒಪ್ಪಿಕೊಂಡಿರುವ ಅಧೀಕ್ಷಕರು, ಸಾವಿಗೆ ನಿಖರ ಕಾರಣ ಬಿಚ್ಚಿಟ್ಟಿದ್ದಾರೆ. "ಮೃತಪಟ್ಟವರೆಲ್ಲರೂ ತೀವ್ರ ಹೃದಯಾಘಾತ (Severe Heart Attack), ಹೃದಯ ವೈಫಲ್ಯ (Heart Failure) ಹಾಗೂ ವಯೋಸಹಜ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದವರಾಗಿದ್ದಾರೆ" ಎಂದು ರೋಗಿಗಳ ಆರೋಗ್ಯ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

57
24 ಗಂಟೆಯೂ ಕೆಲಸ ಮಾಡಿದ ವೈದ್ಯರು; ವಿಶ್ರಾಂತಿ ವೇಳೆ ವಿಡಿಯೋ ಮಾಡಿ ಅಪಪ್ರಚಾರ

ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಅಧೀಕ್ಷಕರು, "ನಿನ್ನೆ ಇಡೀ 24 ಗಂಟೆಯೂ ವೈದ್ಯರು ನಿರಂತರವಾಗಿ ಕೆಲಸ ಮಾಡಿದ್ದಾರೆ. ಇಬ್ಬರು ಡಿಎಎಂ (DM) ವೈದ್ಯರು ಕರ್ತವ್ಯದಲ್ಲಿದ್ದು, ರೋಗಿಗಳ ಸಂಬಂಧಿಕರ ಜೊತೆಯೂ ನಿರಂತರ ಸಂಪರ್ಕದಲ್ಲಿದ್ದರು. ವೈದ್ಯರು ಸತತ ಕೆಲಸದ ನಂತರ ಸ್ವಲ್ಪ ಸಮಯ ವಿಶ್ರಾಂತಿ ಪಡೆಯುತ್ತಿದ್ದಾಗ ಸಂಬಂಧಿಕರು ಅದನ್ನು ಚಿತ್ರೀಕರಿಸಿ ವಿಡಿಯೋ ಹರಿಬಿಟ್ಟಿದ್ದಾರೆ. ಸತ್ಯ ತಿಳಿಯಲು ಬೇಕಿದ್ದರೆ ಆಸ್ಪತ್ರೆಯ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಬಹುದು" ಎಂದು ಸವಾಲು ಹಾಕಿದ್ದಾರೆ.

67
ಕಳೆದ 17 ದಿನಗಳಲ್ಲಿ 64 ಮಂದಿ ಸಾವು

ನಿನ್ನೆ ಒಂದೇ ದಿನ 11 ಮಂದಿ ರೋಗಿಗಳ ಸಾವಿನೊಂದಿಗೆ ಜಯದೇವ ಆಸ್ಪತ್ರೆಯಲ್ಲಿ ಕಳೆದ 17 ದಿನದಲ್ಲಿ ನಿಧನರಾದ ಹೃದ್ರೋಗಿಗಳ ಸಂಖ್ಯೆ 64ಕ್ಕೆ ಏರಿದೆ. ಜೂನ್‌ ತಿಂಗಳ ಅಂಕಿ ಅಂಶವನ್ನು ಸ್ವತಃ ಆಸ್ಪತ್ರೆ ಬಿಡುಗಡೆ ಮಾಡಿದೆ. ಮಂಗಳವಾರ ಆಸ್ಪತ್ರೆಗೆ ಒಟ್ಟು 77 ಒಳರೋಗಿಗಳು ದಾಖಲಾಗಿದ್ದರು. ಇದೇ ತಿಂಗಳು 9ರಂದು 65 ಒಳ ರೋಗಿಗಳ ಪೈಕಿ 8 ರೋಗಿಗಳ ಸಾವು. ಆಸ್ಪತ್ರೆಯ ನಿತ್ಯದ ಮಾರ್ಟಾಲಿಟಿ ರೇಟ್ 6ರಿಂದ7. ನಿನ್ನೆ ಹೆಚ್ಚು ಪ್ರಮಾಣ ರೋಗಿಗಳ ಸಾವು ದಾಖಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

77
ಒಂದು ವರ್ಷದಲ್ಲಿ 1245 ರೋಗಿಗಳ ಸಾವು

ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದು ವರ್ಷದಲ್ಲಿ 1245 ರೋಗಿಗಳು ಸಾವು ಕಂಡಿದ್ದಾರೆ. 2025ರಲ್ಲಿ ಆಸ್ಪತ್ರೆಗೆ 21,577 ರೋಗಿಗಳು ದಾಖಲಾಗಿದ್ದು, ಇದರಲ್ಲಿ 1,245 ಮಂದಿ ಸಾವು ಕಂಡಿದ್ದಾರೆ. ಒಂದು ವರ್ಷದಲ್ಲಿ ಸಾವಿಗೀಡಾದ ರೋಗಿಗಳ ಶೇಕಡಾವಾರು ಸಂಖ್ಯೆ 5.77 ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

Read more Photos on
click me!

Recommended Stories