ಜಿಲ್ಲೆಯಲ್ಲಿ ಸೇಬಿನ ಬೆಲೆ ಕೆಜಿಗೆ 80 ರಿಂದ 100 ವರೆಗೆ ಇದ್ದರೆ, ಈರುಳ್ಳಿ ಕೆಜಿಗೆ 80 ರಿಂದ 120ರ ವರೆಗೆ ಮಾರಾಟವಾಗುತ್ತಿದೆ. ಸಗಟು ದರದಲ್ಲಿ ಈರುಳ್ಳಿಯು 4500 ಮಾರಾಟವಾಗುತ್ತಿದೆ. ಆದರೆ, ಇದರ ಲಾಭ ಮಾತ್ರ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ಬೆಳೆಗಾರರಿಗೆ ಸಿಗುತ್ತಿಲ್ಲ. ನಿರಂತರ ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ. ಅದರಲ್ಲಿಯೂ ಕಪ್ಪು ಮಣ್ಣಿನಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ತೇವಾಂಶದಿಂದ ಕೂಡಿರುತ್ತದೆ. ರೈತರ ಹೊಲದಲ್ಲಿ ಈರುಳ್ಳಿಯೇ ಉಳಿದಿಲ್ಲ. ಸದ್ಯ ಸೇಬು ಹಣ್ಣಿಗಿಂತ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿರುವ ಈರುಳ್ಳಿ ಬೆಲೆಯ ಲಾಭ ರೈತರಿಗೆ ಮಾತ್ರ ಸಿಗುತ್ತಿಲ್ಲ.
ಜಿಲ್ಲೆಯಲ್ಲಿ ಸೇಬಿನ ಬೆಲೆ ಕೆಜಿಗೆ 80 ರಿಂದ 100 ವರೆಗೆ ಇದ್ದರೆ, ಈರುಳ್ಳಿ ಕೆಜಿಗೆ 80 ರಿಂದ 120ರ ವರೆಗೆ ಮಾರಾಟವಾಗುತ್ತಿದೆ. ಸಗಟು ದರದಲ್ಲಿ ಈರುಳ್ಳಿಯು 4500 ಮಾರಾಟವಾಗುತ್ತಿದೆ. ಆದರೆ, ಇದರ ಲಾಭ ಮಾತ್ರ ಗದಗ ಜಿಲ್ಲೆ ಸೇರಿದಂತೆ ರಾಜ್ಯದ ಬೆಳೆಗಾರರಿಗೆ ಸಿಗುತ್ತಿಲ್ಲ. ನಿರಂತರ ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ. ಅದರಲ್ಲಿಯೂ ಕಪ್ಪು ಮಣ್ಣಿನಲ್ಲಿ ಬೆಳೆಯುವ ಈರುಳ್ಳಿ ಹೆಚ್ಚು ತೇವಾಂಶದಿಂದ ಕೂಡಿರುತ್ತದೆ. ರೈತರ ಹೊಲದಲ್ಲಿ ಈರುಳ್ಳಿಯೇ ಉಳಿದಿಲ್ಲ. ಸದ್ಯ ಸೇಬು ಹಣ್ಣಿಗಿಂತ ಹೆಚ್ಚಿನ ದರದಲ್ಲಿ ಮಾರಾಟವಾಗುತ್ತಿರುವ ಈರುಳ್ಳಿ ಬೆಲೆಯ ಲಾಭ ರೈತರಿಗೆ ಮಾತ್ರ ಸಿಗುತ್ತಿಲ್ಲ.