ಪರೋಪಕಾರಾರ್ಥಂ ಇದಂ ಶರೀರಂ ಎನ್ನುವ ವೇದದ ನುಡಿಯನ್ನು ಅಕ್ಷರಶ: ಪಾಲಿಸುವ ಪಥದಲ್ಲಿ ಇನ್ನೊಂದು ಜೀವವನ್ನು ಉಳಿಸುವ ಪ್ರಕ್ರಿಯೆಯಲ್ಲಿರುವಾಗ ತನ್ನ ಪ್ರಾಣವನ್ನೇ ಕಳೆದುಕೊಂಡಿರುವ ಸಹೋದರಿ ಶ್ರೀಮತಿ ಅರ್ಚನಾ ಕಾಮತ್ ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಪತಿ, ಆತ್ಮೀಯರಾದ ಶ್ರೀ ಸಿಎ ಚೇತನ್ ಕಾಮತ್ ಹಾಗೂ ಕುಟುಂಬಕ್ಕೆ, ಹಿತೈಷಿಗಳಿಗೆ, ಅವರು ಸೇವೆ ಸಲ್ಲಿಸುತ್ತಿದ್ದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ವೃಂದಕ್ಕೆ ಈ ದು:ಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಪೋಸ್ಟ್ ಹಂಚಿಕೊಂಡಿದ್ದಾರೆ.