ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಕರ್ಷಕ ಕೆತ್ತನೆಗಳೊಂದಿಗೆ ಪಾರಂಪರಿಕ ಶೈಲಿಯಲ್ಲಿ ಭವ್ಯವಾಗಿ ನಿರ್ಮಿಸಲಾಗಿರುವ ಸತ್ಯಧರ್ಮ ಚಾವಡಿಯಲ್ಲಿ 500 ವರ್ಷಗಳ ಹಿಂದೆ ಬಾಳಿ ಬದುಕಿದ ದೈವಾಂಶ ಸಂಭೂತೆ ಮಾತೆ ದೇಯಿ ಬೈದೈತಿಯ ಬಿಂಬ ಪ್ರತಿಷ್ಠೆ, ಗುರು ಸಾಯನ ಬೈದರ ಗುರುಪೀರ ಸ್ಥಾಪನೆ ಮಾಡಲಾಯಿತು.
undefined
ಗೆಜ್ಜೆಗಿರಿಯ ಶಿಖರಾಗ್ರದಲ್ಲಿ ಭವ್ಯವಾಗಿ ನಿರ್ಮಿಸಲಾದ ಮೂಲಸ್ಥಾನ ಗರಡಿಯಲ್ಲಿ ತುಳುನಾಡಿನ ಅವಳಿ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ಹಾಗೂ ಗುರು ಸಾಯನ ಬೈದ್ಯರ ಬಿಂಬ ಪ್ರತಿಷ್ಠೆ ಮಾಡಿ ಬ್ರಹ್ಮಕಲಶೋತ್ಸವ ನೆರವೇರಿಸಲಾಯಿತು.
undefined
ಗೆಜ್ಜೆಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಸುಕಿನ ವೇಳೆ ಗಣಪತಿ ಹೋಮ, ಶಿಖರ ಪ್ರತಿಷ್ಠೆ, ಗೆಜ್ಜೆಗಿರಿ ಶಿಖರಾಗ್ರದಲ್ಲಿ ನೂತನವಾಗಿ ನಿರ್ಮಿಸಲಾದ ಶಿಲಾಮಯ ಬೆರ್ಮೆರೆ ಗುಂಡದಲ್ಲಿ ಬೆರ್ಮೆರ್ ಶಿಲಾ ಸ್ಥಾಪನೆ ನಡೆಯಿತು.
undefined
ಜೀರ್ಣೋದ್ಧಾರಗೊಂಡ ದೇಯಿ ಬೈದೆತಿ ಸಮಾಧಿ
undefined
ಬ್ರಹ್ಮ ಕಲಶೋತ್ಸವದ ಸಕಲ ಸಿದ್ಧತೆಗಳು ನಡೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ.
undefined
ಬ್ರಹ್ಮಕಲಶೋತ್ಸವದ ಬಳಿಕ ಪ್ರಸನ್ನ ಪೂಜೆ, ಸತ್ಯಧರ್ಮ ಚಾವಡಿಯಲ್ಲಿ ನೈವೇದ್ಯ, ಮಹಾಪೂಜೆ, ಮಧ್ಯಾಹ್ನ ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಧೂಮಾವತಿ ಸಾನಿಧ್ಯದಲ್ಲಿ ನವಕ ಪ್ರದಾನ ಹೋಮ, ಧ್ವಜಪೂಜೆ, ನೂತನವಾಗಿ ನಿರ್ಮಿಸಲಾದ ತಾಮ್ರ ಹೊದಿಕೆಯ ಧ್ವಜಸ್ತಂಭದಲ್ಲಿ ಧ್ವಜಾರೋಹಣ ಕಾರ್ಯಕ್ರಮಗಳು ನಡೆದವು.
undefined
ದೈಯಿ ಬೈದ್ಯತಿ ಮಹಾ ಸಮಾಧಿಯ ನೋಟ
undefined
ಹೂಗಳಿಂದ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು
undefined
ಬ್ರಹ್ಮಕಲಶೋತ್ಸವ ಪ್ರಯುಕ್ತ ಗರಡಿ ಸುತ್ತ ಅಲಂಕಾರ ಮಾಡಲಾಗಿದೆ.
undefined
ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಭಕ್ತರು
undefined
ಗರಡಿಯ ಬಳಿ ಕೈ ಮುಗಿದು ನಮಿಸುತ್ತಿರುವ ಭಕ್ತರು
undefined