COVID19ನಿಂದ ಮೃತ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಹಾರೆ ಹಿಡಿದು ಗುಂಡಿ ತೋಡಿದ ಶಾಸಕ

First Published Jun 25, 2020, 11:13 AM IST

ಕೊರೋನಾದಿಂದ ಮೃತಪಟ್ಟಕುಟುಂಬಸ್ಥರ ಮೃತದೇಹ ನೋಡಲೂ ಹೋಗದಿರುವ ಭೀತಿಯ ವಾತಾವರಣ ಇರುವಾಗ ಮಂಗಳೂರಿನಲ್ಲಿ ಮಂಗ​ಳವಾರ, ಕೊರೋನಾದಿಂದ ಸಾವಿಗೀಡಾದ 70 ವರ್ಷ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಶಾಸಕ ಯು.ಟಿ. ಖಾದರ್‌ ಸ್ವತಃ ಹಾರೆ ಹಿಡಿದು ಗುಂಡಿ ತೋಡಿ, ಅಂತ್ಯಸಂಸ್ಕಾರದ ಉಸ್ತುವಾರಿಯನ್ನೂ ವಹಿಸಿ ಗಮನ ಸೆಳೆ​ದಿ​ದ್ದಾರೆ. ಹಾಗೆಯೇ ಈ ಘಟನೆಯಿಂದ ವಿವಾದಕ್ಕೆಡೆಯಾಗಿದ್ದಾರೆ. ಇಲ್ಲಿವೆ ಫೋಟೋಸ್

ಕೊರೋನಾ ವೈರಸ್‌ನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಕ್ರಿಯೆಯಲ್ಲಿ ಪಿಪಿಇ ಕಿಟ್ ಧರಿಸದೇ ಪಾಲ್ಗೊಳ್ಳುವ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಯು.ಟಿ. ಖಾದರ್ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
undefined
ಮಂಗಳವಾರವಷ್ಟೇ(ಜೂ.24) ಮಂಗಳೂರಿನಲ್ಲಿ 70 ವರ್ಷದ ವೃದ್ದರೊಬ್ಬರು ಕೊರೋನಾದಿಂದಾಗಿ ಮೃತಪಟ್ಟಿದ್ದರು.
undefined
ಮಂಗಳೂರಿನ ಬೋಳಾರ ಮಸೀದಿಯ ಖಬರ್ಸ್ತಾನ್‌ನಲ್ಲಿ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಲಾಯಿತು.ಈ ವೇಳೆ ಆರೋಗ್ಯ ಇಲಾಖೆಯ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ಮಾಡುತ್ತಿದ್ದರು. ಈ ವೇಳೆ ಭಾಗವಹಿಸಿದ್ದ ಖಾದರ್, ಸ್ವತಃ ತಾವೇ ಗುದ್ದಲಿಯಿಂದ ಮಣ್ಣು ಅಗೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
undefined
ಆರಂಭದಲ್ಲಿ ಬಂದರು ಮಸೀದಿ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರಕ್ಕೆ ಗುಂಡಿ ತೋಡಲಾಗಿತ್ತು. ಆದರೆ ಅಲ್ಲಿ ನೀರು ಉಕ್ಕಿ ಬಂದಿದ್ದರಿಂದ ಬೋಳಾರ ಮಸೀದಿಯ ದಫನ ಭೂಮಿಯಲ್ಲಿ ಸಿದ್ಧತೆ ನಡೆಸಲಾಯಿತು.
undefined
ಗುಂಡಿ ತೋಡುವ ವೇಳೆ ಸ್ಥಳಕ್ಕೆ ತೆರಳಿದ ಶಾಸಕ ಖಾದರ್‌ ಸ್ವತಃ ಹಾರೆ ಹಿಡಿದು ಗುಂಡಿ ತೋಡುವ ಕೆಲಸವನ್ನೂ ಮಾಡಿದ್ದರು. ನಂತರ ಆರೋಗ್ಯ ಇಲಾಖೆ ಸಿಬ್ಬಂದಿ ಜತೆ ಮೃತದೇಹದ ಅಂತ್ಯಸಂಸ್ಕಾರವನ್ನೂ ನೆರವೇರಿಸಿದ್ದಾರೆ.
undefined
ಅಂತ್ಯಸಂಸ್ಕಾರದ ವೇಳೆ ಖಾದರ್‌ ಪಿಪಿಇ ಕಿಟ್‌ ಧರಿಸಿರಲಿಲ್ಲ. ಈ ಮೂಲಕ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಖಾದರ್‌, ಅಂತ್ಯಸಂಸ್ಕಾರ ನಡೆಸುವುದು ಪುಣ್ಯ ಕಾರ್ಯ. ಹಾಗಾಗಿ ಈ ಕಾರ್ಯದಲ್ಲಿ ಭಾಗಿಯಾಗಿದ್ದೆ. ಕೊರೋನಾದಿಂದ ಸತ್ತ ವ್ಯಕ್ತಿಯಿಂದ ಸೋಂಕು ಹರಡುತ್ತದೆ ಎನ್ನುವುದಕ್ಕೆ ಎಲ್ಲೂ ನಿದರ್ಶನಗಳಿಲ್ಲ. ಈ ಕುರಿತು ತಜ್ಞರೊಂದಿಗೆ ಸಮಾಲೋಚನೆ ಮಾಡಿಯೇ ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಂಡ ಬಳಿಕವೇ ಭಾಗಿಯಾಗಿದ್ದೇನೆ. ನಂತರವೂ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದ್ದೇನೆ. ಪಿಪಿಇ ಕಿಟ್‌ ಧರಿಸುವುದು ಒಳ್ಳೆಯದೇ ಎಂದಿದ್ದಾರೆ.
undefined
ಈ ಮಾನವೀಯ ಕಾರ್ಯ ಮಾಡಲು ಆಗದೆ ಇದ್ದರೆ ಎಷ್ಟುಶಿಕ್ಷಣ ಪಡೆದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ ಖಾದರ್‌, ಕೊರೋನಾದಿಂದ ಯಾರೋ ತೀರಿಕೊಂಡರೂ ಅವರವರ ಧರ್ಮಕ್ಕೆ ಅನುಗುಣವಾಗಿ ಅಂತ್ಯಸಂಸ್ಕಾರ ಮಾಡುವುದು ಎಲ್ಲರ ಜವಾಬ್ದಾರಿ. ಈ ಮನಸ್ಥಿತಿ ಜನರಲ್ಲಿ ಬರಬೇಕು ಎಂದು ಹೇಳಿದ್ದಾರೆ.
undefined
click me!