ಭೀಕರ ಚಂಡಮಾರುತ ಬರುತ್ತೆ ಎಂದ್ರೂ ಜನಕ್ಕೆ ಡೋಂಟ್ ಕೇರ್, ಸೆಲ್ಫೀಯಲ್ಲೇ ಬ್ಯುಸಿ

First Published Jun 3, 2020, 1:52 PM IST

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ. ಆದರೂ ಜನ ಮಾತ್ರ ಡೋಂಟ್ ಕೇರ್ ಎಂಬಂತೆ ಸೆಲ್ಫೀ ತಗೊಳೋದ್ರಲ್ಲೇ ಬ್ಯುಸಿ ಇದ್ದಾರೆ.

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮಲ್ಪೆ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ.
undefined
ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚು ಕಡಿಮೆಯಾಗಿಲ್ಲ. ಚಂಡಮಾರುತದ ಎಚ್ಚರಿಕೆ ಇದ್ದರೂ ಬೀಚ್ ನಲ್ಲಿ ಜನ ಸೆಲ್ಫಿ ತೆಗೆಯುವುದರಲ್ಲಿಯೇ ಮಗ್ನರಾಗಿದ್ದಾರೆ.
undefined
ಕಾಲೇಜು ವಿದ್ಯಾರ್ಥಿನಿಯರಿಂದಲೂ ಬೀಚ್ ನಲ್ಲಿ ರೌಂಡ್ಸ್ ಹಾಕುತ್ತಿದ್ದು, ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯ ವಹಿಸಲಾಗುತ್ತಿದೆ.ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯಗಳು ಕಂಡು ಬಂದಿದೆ.
undefined
ಲಾಕ್ ಡೌನ್ ಹಿನ್ನೆಲೆ ‌ಬೀಚ್ ಪ್ರವೇಶ ನಿಷೇಧವಿದ್ದರೂ ಅಲೆಗಳ ಸನಿಹವೇ ನಿಂತು ಸೆಲ್ಫಿ ತೆಗೆದುಕೊಳ್ಳೋ ಹುಚ್ಚಾಟ ಮುಂದುವರಿದಿದೆ.
undefined
ಅಪಾಯವಿದೆ ಎಂದು ಗೊತ್ತಾದ ಮೇಲೂ ಜನರು ಮಾತ್ರ ಕ್ಯಾರೇ ಎನ್ನುತ್ತಿಲ್ಲ. ಆರಾಮವಾಗಿ ಜನ ಮೊಬೈಲ್‌ನಲ್ಲಿ ಸೆಲ್ಫೀ ಕ್ಲಿಕ್ಕಿಸುತ್ತಿರುವ ದೃಶ್ಯ ಕಂಡು ಬಂತು.
undefined
ಅಲೆಗಳು ರೆಸಾರ್ಟ್‌ಗೆ ಬಡಿಯಲು ಆರಂಭಿಸಿದೆ. ಕಳೆದ ವರ್ಷದ ಮಳೆಗಾಲ ಸಂದರ್ಭ ರೆಸಾರ್ಟ್‌ ತಡೆಗೋಡೆಗಳು ಸಮುದ್ರಪಾಲಾಗಿತ್ತು. ಈಗ ರೆಸಾರ್ಟ್‌ಗೆ ಅಲೆಗಳು ಬಡಿಯಲಾರಂಭಿಸಿದೆ.
undefined
ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ.ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
undefined
click me!