ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರ ಪಾದಪೂಜೆ ಮಾಡಿ ಗೌರವ ಸಲ್ಲಿಕೆ
First Published May 1, 2020, 10:11 AM ISTಬಾಗಲಕೋಟೆ(ಮೇ.01): ಪ್ರಾಣವನ್ನೇ ಪಣಕ್ಕಿಟ್ಟು ಮಹಾಮಾರಿ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಿಳ್ಳಿ ಕುಟುಂಬದವರು ಪಾದ ಪೂಜೆ ಗೌರವ ಸಲ್ಲಿಸಿದ ಘಟನೆ ಜಿಲ್ಲೆಯ ರಬಕವಿ ಬನಹಟ್ಟಿ ಪಟ್ಟಣದಲ್ಲಿ ಘಟನೆ ನಡೆದಿದೆ. ಕೊರೋನಾ ವಾರಿಯರ್ಸ್ಗೆ ಪಾದಪೂಜೆ ಸಲ್ಲಿಸಿದ ಮಿಳ್ಳಿ ಕುಟುಂಬದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.