ರಾಯಚೂರು: ದ್ವೀಪದಲ್ಲಿ ಸಿಲುಕಿದವರ ಪರದಾಟ, ಡ್ರೋನ್ ಮೂಲಕ ಔಷಧಿ, ಅಗತ್ಯ ಸಾಮಗ್ರಿಗಳ ಪೂರೈಕೆ
First Published Aug 21, 2020, 10:18 AM ISTರಾಯಚೂರು(ಆ.21): ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರಿಂದ ಜಿಲ್ಲೆಯ ಜಿಲ್ಲೆ ಲಿಂಗಸೂಗೂರು ತಾಲೂಕಿನ ಕರಕಲಗಡ್ಡಿ ನಡುಗಡ್ಡೆಯಲ್ಕಿ ನಾಲ್ವರು ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಈ ಘಟನೆಯ ಬಗ್ಗೆ ಸುವರ್ಣ ನ್ಯೂಸ್ ವರದಿಯನ್ನ ಪ್ರಸಾರ ಮಾಡಿತ್ತು. ವರದಿ ಬಳಿಕ ಎನ್ಡಿಆರ್ಎಫ್ ತಂಡ ನಿನ್ನೆ(ಗುರುವಾರ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.