GESCOM Shocking: ಕರೆಂಟ್‌ ಕಟ್‌ ಮಾಡಿದ್ದಕ್ಕೆ ಜೆಸ್ಕಾಂ ಕಚೇರಿಗೇ ಬೆಂಕಿ ಹಚ್ಚಿ ಸುಟ್ಟ ರೈತ!

Kannadaprabha News   | Kannada Prabha
Published : Jun 25, 2026, 05:22 AM IST

ಬಿಲ್‌ ಬಾಕಿ ಉಳಿಸಿಕೊಂಡಿದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಜೆಸ್ಕಾಂ ಸಿಬ್ಬಂದಿ ಕ್ರಮದಿಂದ ಕೋಪಗೊಂಡ ರೈತನೊಬ್ಬ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ) ಕಚೇರಿಗೇ ಬೆಂಕಿ ಇಟ್ಟ ಘಟನೆ ರಾಯಚೂರು ಜಿಲ್ಲೆಯ ಮಲ್ಲಟ ಗ್ರಾಮದಲ್ಲಿ ನಡೆದಿದೆ.

PREV
15
ರಾಯಚೂರು: ಸಿಬ್ಬಂದಿಗೆ ಸಪ್ಪಲಿಯಿಂದ ಹೊಡೆಯಲು ಯತ್ನ

ಬಿಲ್‌ ಬಾಕಿ ಉಳಿಸಿಕೊಂಡಿದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಜೆಸ್ಕಾಂ ಸಿಬ್ಬಂದಿ ಕ್ರಮದಿಂದ ಕೋಪಗೊಂಡ ರೈತನೊಬ್ಬ ಜೆಸ್ಕಾಂ (ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ) ಕಚೇರಿಗೇ ಬೆಂಕಿ ಇಟ್ಟ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಮಲ್ಲಟ ಗ್ರಾಮದ ಜೆಸ್ಕಾಂ ಉಪ ಕಚೇರಿಯಲ್ಲಿ ನಡೆದಿದೆ.

25
ವಿದ್ಯುತ್ ಬಿಲ್ ಬಾಕಿ

ಹಳ್ಳಿಹೊಸೂರು ಗ್ರಾಮದ ಶಿವಪ್ಪ ಬಸನಗೌಡ ಗಡಿಗಿ ಎಂಬಾತ 11 ಸಾವಿರ ರು.ಗಳ ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿದ್ದ. ಬಾಕಿ ಬಿಲ್‌ ಹಣ ಪಾವತಿಸುವಂತೆ ಹಲವು ಬಾರಿ ನೋಟಿಸ್ ನೀಡಲಾಗಿತ್ತು. 

35
ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದ ಜೆಸ್ಕಾಂ ಸಿಬ್ಬಂದಿ

ಆದರೂ, ಬಾಕಿ ಬಿಲ್‌ ಹಣ ಪಾವತಿಸಿರಲಿಲ್ಲ. ಹೀಗಾಗಿ, ಜೆಸ್ಕಾಂ ಸಿಬ್ಬಂದಿ ರಿಚರ್ಡ್ ಎಂಬುವರು ಮೇಲಧಿಕಾರಿಗಳ ಸೂಚನೆ ಮೇರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು.

45
ಸಿಬ್ಬಂದಿ ಮೇಲೆ ಹಲ್ಲೆ

ಇದರಿಂದ ಆಕ್ರೋಶಗೊಂಡ ಶಿವಪ್ಪ ಬುಧವಾರ ಮಲ್ಲಟ ಗ್ರಾಮದ ಜೆಸ್ಕಾಂ ಉಪ ಕಚೇರಿಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ. ಹಲ್ಲೆಗೆ ಹೆದರಿ ಸಿಬ್ಬಂದಿ ತಪ್ಪಿಸಿಕೊಂಡು ಕಚೇರಿಯಿಂದ ಹೊರಗೆ ಬರುತ್ತಿದ್ದಂತೆ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪುಂಡಾಟ ಮೆರೆದಿದ್ದಾನೆ.

55
ಜೆಸ್ಕಾಂ ದಾಖಲೆಗಳು, ಲ್ಯಾಪ್‌ಟಾಪ್ ಸುಟ್ಟು ಭಸ್ಮ

ಇದರಿಂದಾಗಿ ಕಚೇರಿಯ ದಾಖಲೆಗಳು, ಕಂಪ್ಯೂಟರ್, ಲ್ಯಾಪ್‌ಟಾಪ್, ಬ್ಯಾಟರಿ ಮತ್ತು ನಗದು ಸೇರಿದಂತೆ ಸುಮಾರು 1 ಲಕ್ಷ ರು. ಮೌಲ್ಯದ ಸಾರ್ವಜನಿಕ ಸ್ವಾಮ್ಯದ ಆಸ್ತಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಿರವಾರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.

Read more Photos on
click me!

Recommended Stories