ಸ್ಪರ್ಶ್ ಆಸ್ಪತ್ರೆಯು(Sparsh Hospital) ನೂತನವಾಗಿ ನಿರ್ಮಿಸಿರುವ ಬಹು ಅಂಗಾಂಗ ಕಸಿ ಕೇಂದ್ರ ಶುಕ್ರವಾರ ಚಾಲನೆ ನೀಡಿದ ಅವರು, ದೇಶದಲ್ಲಿ ಸುಮಾರು 2 ಲಕ್ಷ ಅಂಗಾಂಗ ಕಸಿಗೆ ಬೇಡಿಕೆ ಇದೆ. ಆದರೆ ಇದರಲ್ಲಿ ಶೇ.4ರಷ್ಟು ಅಂಗಾಂಗ ದೊರೆಯುತ್ತಿವೆ. ಹೀಗಾಗಿಯೇ, ಅನೇಕರು ಅಂಗಾಂಗಗಳು ದೊರೆಯದೆ ನಿಧನ ಹೊಂದುತ್ತಿದ್ದಾರೆ. ವ್ಯಕ್ತಿ ಮರಣ ಹೊಂದಿದ ಬಳಿಕ ತನ್ನ ಅಂಗಾಂಗಗಳ ಮೂಲಕ ಎಂಟು ಜನರ ಜೀವ ಉಳಿಸಲು ಸಾಧ್ಯವಿದೆ. ಆದರೆ ಅನೇಕ ತಪ್ಪು ತಿಳಿವಳಿಕೆಯಿಂದ ಅಂಗಾಂಗ ದಾನ ಕಡಿಮೆಯಾಗಿದೆ. ಬದುಕಿರುವಾಗ ರಕ್ತದಾನ ಮಾಡುವಂತೆಯೇ ಸತ್ತ ನಂತರ ಅಂಗಾಂಗ ದಾನ ಮಾಡುವುದು ಅಗತ್ಯ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದ ಸುಧಾಕರ್