ಕಣ್ಣಾರೆ ಕಂಡಿದ್ದ ದೃಶ್ಯಗಳನ್ನು ನೆನಪಿಸಿಕೊಂಡ ಶಿಲ್ಪಿ:
ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆಗೆ ಮಾತನಾಡಿದ ಅರುಣ್ ಯೋಗಿರಾಜ್, ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಸಮಯದಲ್ಲಿ ತಾವು ಕಂಡ ದೃಶ್ಯಗಳನ್ನು ಹಂಚಿಕೊಂಡರು. 'ದೇವಸ್ಥಾನಕ್ಕೆ ದೇಣಿಗೆ ನೀಡುವವರ ಸಂಖ್ಯೆ ಅಪಾರವಾಗಿತ್ತು. ಕೇವಲ ಸಾಮಾನ್ಯ ಜನರಲ್ಲ, ದೊಡ್ಡ ಉದ್ಯಮಿಗಳು, ರಾಜಕಾರಣಿಗಳು ಮತ್ತು ವಿಐಪಿಗಳು ಚೆಕ್ ಹಿಡಿದು ಸಾಲಿನಲ್ಲಿ ನಿಂತು ದೇಣಿಗೆ ನೀಡುತ್ತಿದ್ದರು. ಅಂತಹ ಭಕ್ತಿ ಮತ್ತು ಸಮರ್ಪಣಾ ಮನೋಭಾವವನ್ನು ನಾನು ಕಣ್ಣಾರೆ ಕಂಡಿದ್ದೇನೆ. ಈಗ ಇಂತಹ ಆರೋಪಗಳು ಕೇಳಿಬರುತ್ತಿರುವುದು ನಿಜಕ್ಕೂ ದುರದೃಷ್ಟಕರ' ಎಂದು ಅಸಮಾಧಾನ ವ್ಯಕ್ತಪಡಿಸಿದರು.