ಚಿತ್ರದುರ್ಗ (ಜೂ.17): ನಟ ದರ್ಶನ್ ಮತ್ತು ಗ್ಯಾಂಗ್ನಿಂದ ಬರ್ಬರವಾಗಿ ಹತ್ಯೆಗೀಡಾದ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬದಲ್ಲಿ ಮತ್ತೊಂದು ಶೋಕದ ಛಾಯೆ ಆವರಿಸಿದೆ. ರೇಣುಕಾಸ್ವಾಮಿ ಅವರ ಅಜ್ಜಿ, ಶತಾಯುಷಿ ಪ್ರಮೀಳಾದೇವಿ (100) ಅವರು ಇಂದು ವಿಧಿವಶರಾಗಿದ್ದಾರೆ. ಮೊಮ್ಮಗನ ಅಕಾಲಿಕ ಹಾಗೂ ಕ್ರೂರ ಸಾವಿನ ನೋವಿನಿಂದ ಅವರು ತೀವ್ರವಾಗಿ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.