ಮನವಿ ಸ್ವೀಕರಿಸಿದ ಸಚಿವ ವಿ.ಸೋಮಣ್ಣ, ದೇಶದಾದ್ಯಂತ ಹೊಸ ರೈಲು ಮಾರ್ಗ, ರೈಲು ಸೇವೆಗಳ ವಿಸ್ತರಣೆ ಹಾಗೂ ವಿವಿಧ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಬೇಡಿಕೆಗಳಿವೆ.ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಆದ್ಯತೆ ಆಧಾರದ ಮೇಲೆ ಪರಿಗಣಿಸಲಾಗುತ್ತಿದೆ. ಕುಷ್ಟಗಿಯಿಂದ ಬೆಂಗಳೂರಿಗೆ ರೈಲು ಸೇವೆ ಆರಂಭಿಸುವ ಕುರಿತು ಕುಷ್ಟಗಿಯ ಶಾಸಕ ದೊಡ್ಡನಗೌಡ ಪಾಟೀಲ ಒತ್ತಡ ಹೇರಿದ್ದು, ಈ ಬೇಡಿಕೆಯ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮಹಾಂತಯ್ಯ ಅರಳೇಲಿಮಠ, ಬಾಬು ಘೋರ್ಪಡೆ, ಶರಣಪ್ಪ ಲಿಂಗಶೆಟ್ಟರ ಸೇರಿದಂತೆ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.