ಸಭೆಯ ಆರಂಭದಲ್ಲಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದರಲ್ಲಿ ಸಂಸ್ಕಾರ ಭಾರತೀಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಮೀರ್ ಚಂದ್, ಕನ್ನಡ ಲೇಖಕರಾದ ಜಿ. ವೆಂಕಟಸುಬ್ಬಯ್ಯ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಖ್ಯಾತ ಕವಿ ಡಾ. ಎಚ್. ಸಿದ್ದಲಿಂಗಯ್ಯ, ರಾಜಕಾರಣಿ ಆಸ್ಕರ್ ಫೆರ್ನಾಂಡಿಸ್, ಸ್ವಾಮಿ ಅಧ್ಯಾತ್ಮಾನಂದಜೀ, ಸ್ವಾಮಿ ಓಂಕಾರಾನಂಜೀ, ಸ್ವಾಮಿ ಅರುಣಗಿರಿಜೀ, ಹಿರಿಯ ಪತ್ರಕರ್ತ ಶ್ಯಾಮ್ ಖೋಸ್ಲಾ ಸೇರಿದಂತೆ ಹಲವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.