ಶಿವಮೊಗ್ಗ ಜನಶತಾಬ್ದಿ, ಮೈಸೂರು – ತಾಳಗುಪ್ಪ ರೈಲು ಸಂಚಾರದಲ್ಲಿ ಬದಲಾವಣೆ; ಯಾವ್ಯಾವ ದಿನ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Published : Jun 14, 2026, 07:55 PM IST

South Western Railway train status: ನೈಋತ್ಯ ರೈಲ್ವೆಯು ಶಿವಮೊಗ್ಗ, ತಾಳಗುಪ್ಪ ಮತ್ತು ಮೈಸೂರು ಮಾರ್ಗವಾಗಿ ಸಂಚರಿಸುವ ಪ್ರಮುಖ ಜನಶತಾಬ್ದಿ ಹಾಗೂ ಎಕ್ಸ್‌ಪ್ರೆಸ್ ರೈಲುಗಳ ಸೇವೆಯಲ್ಲಿ ಭಾರಿ ಬದಲಾವಣೆ ಮಾಡಿದೆ. ಕೆಲವು ರೈಲುಗಳು ಸಂಪೂರ್ಣವಾಗಿ ರದ್ದಾಗಿದ್ದರೆ, ಇನ್ನು ಕೆಲವು ಮಾರ್ಗ ಬದಲಾಯಿಸಲಾಗಿದೆ. 

PREV
15
ಈ ಕೆಳಗಿನ ವಿವರಗಳನ್ನು ಗಮನಿಸಿ

ಈ ಕೆಳಗಿನ ವಿವರಗಳನ್ನು ಗಮನಿಸಿ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಸಿಟಿ ರೈಲು ನಿಲ್ದಾಣದಲ್ಲಿ ಯಾರ್ಡ್ ನವೀಕರಣ ಹಾಗೂ ಪ್ರಮುಖ ಸುರಕ್ಷತಾ ಮೇಲ್ದರ್ಜೆ ಕಾಮಗಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಶಿವಮೊಗ್ಗ ಮತ್ತು ತಾಳಗುಪ್ಪ ಮಾರ್ಗವಾಗಿ ಸಂಚರಿಸುವ ಹಲವು ಪ್ರಮುಖ ರೈಲುಗಳ ಸೇವೆಯನ್ನು ರದ್ದು ಹಾಗೂ ಮಾರ್ಗ ಬದಲಾವಣೆ ಮಾಡಿದೆ. ಆಗಸ್ಟ್ ತಿಂಗಳಲ್ಲಿ ಪ್ರಯಾಣಿಸುವವರು ಈ ಕೆಳಗಿನ ವಿವರಗಳನ್ನು ಗಮನಿಸುವುದು ಅಗತ್ಯ.

25
ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)

ಸಂಪೂರ್ಣ ರದ್ದಾಗಿರುವ ರೈಲುಗಳು (ಆಗಸ್ಟ್ 4)
ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16581): 2026ರ ಆಗಸ್ಟ್ 4ರಂದು ಈ ರೈಲಿನ ಸಂಚಾರ ಇರುವುದಿಲ್ಲ.
ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16582): 2026ರ ಆಗಸ್ಟ್ 4ರಂದು ಈ ರೈಲಿನ ಸೇವೆಯನ್ನೂ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

35
ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)

ಭಾಗಶಃ ರದ್ದಾಗಿರುವ ರೈಲುಗಳು (ಆಗಸ್ಟ್ 1 ರಿಂದ ಆಗಸ್ಟ್ 3)
ತಾಳಗುಪ್ಪ–ಬೆಂಗಳೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 20652): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಸಂಚರಿಸುವುದಿಲ್ಲ. ಇದು ಅರಸೀಕೆರೆ ನಿಲ್ದಾಣದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಲಿದೆ.
ಶಿವಮೊಗ್ಗ ಟೌನ್–ಬೆಂಗಳೂರು ಜನಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12090): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲೇ ನಿಲ್ಲಲಿದೆ.
ಬೆಂಗಳೂರು–ಶಿವಮೊಗ್ಗ ಟೌನ್ ಜನಶತಾಬ್ದಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12089): ಆಗಸ್ಟ್ 1ರಿಂದ 3ರವರೆಗೆ ಈ ರೈಲು ಬೆಂಗಳೂರಿನ ಬದಲಾಗಿ ಅರಸೀಕೆರೆ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ.

45
ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)

ಮಾರ್ಗ ಬದಲಾವಣೆ ಆಗಿರುವ ರೈಲುಗಳು (ಆಗಸ್ಟ್ 3)
ಬೆಂಗಳೂರು ನಿಲ್ದಾಣದ ಕಾಮಗಾರಿ ಹಿನ್ನೆಲೆಯಲ್ಲಿ ಕೆಳಗಿನ ರೈಲುಗಳು ಬೆಂಗಳೂರು, ಯಶವಂತಪುರ ಮತ್ತು ತುಮಕೂರು ನಿಲ್ದಾಣಗಳಿಗೆ ಬರುವುದಿಲ್ಲ. ಬದಲಾಗಿ ಪರ್ಯಾಯ ಮಾರ್ಗದಲ್ಲಿ ಚಲಿಸಲಿವೆ:
ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16228): ಆಗಸ್ಟ್ 3ರಂದು ತಾಳಗುಪ್ಪದಿಂದ ಹೊರಡುವ ಈ ರೈಲು ಅರಸೀಕೆರೆ, ಹಾಸನ ಮತ್ತು ಕೃಷ್ಣರಾಜನಗರ ಮಾರ್ಗವಾಗಿ ಮೈಸೂರು ತಲುಪಲಿದೆ.
ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 16227): ಆಗಸ್ಟ್ 3ರಂದು ಮೈಸೂರಿನಿಂದ ಹೊರಡುವ ಈ ರೈಲು ಕೃಷ್ಣರಾಜನಗರ, ಹಾಸನ ಮತ್ತು ಅರಸೀಕೆರೆ ಮಾರ್ಗವಾಗಿ ಚಲಿಸಲಿದೆ.

55
ಗಮನಿಸಿ:

ಗಮನಿಸಿ: ಮಾರ್ಗ ಬದಲಾಗಿರುವ ಕಾರಣ ಈ ಎರಡೂ ರೈಲುಗಳಿಗೆ ತುಮಕೂರು, ಯಶವಂತಪುರ ಮತ್ತು ಕೆಎಸ್‌ಆರ್‌ ಬೆಂಗಳೂರು ನಿಲ್ದಾಣಗಳ ನಿಲುಗಡೆಯನ್ನು ಕೈಬಿಡಲಾಗಿದೆ. ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ಸೂಚನೆಗಳನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

Read more Photos on
click me!

Recommended Stories