ಕೆರೆ ಏರಿ ಹೊಡೆದು ನೀರು ಪೋಲು:
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಚೆನ್ನತಿಮ್ಮನಪಾಳ್ಯ ಗ್ರಾಮದಲ್ಲಿ ಕೆರೆ ಏರಿ ಒಡೆದು ನೀರು ಪೋಲಾಗಿರುವ ಘಟನೆ ಸಂಭವಿಸಿದೆ. ಕೆರೆಯ ನೀರು ಹೊಳೆಯಂತೆ ಹರಿದು ರೈತರ ಜಮೀನಿಗೆ ನುಗ್ಗಿದ್ದು, ಬೆಳೆ ಹಾನಿಯ ಉಂಟಾಗಿದೆ. ಕಳೆದ 15 ದಿನಗಳ ಹಿಂದೆ ಇದೇ ಕೆರೆ ಏರಿ ಒಡೆದು ಅರ್ಧ ನೀರು ಹೊರಹೋಗಿದ್ದರೂ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳಲಾಗಿರಲಿಲ್ಲ.