ಪತ್ನಿ ಎದುರಲ್ಲೇ ಏಕಾಏಕಿ ಹಲ್ಲೆ:
ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಅವರು ತಮ್ಮ ಪತ್ನಿಯೊಂದಿಗೆ ಕುಂದಾಪುರದ ಹೋಟೆಲೊಂದರಲ್ಲಿ ಚಹಾ ಕುಡಿಯುತ್ತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಡಾ. ಮಹೇಂದ್ರ ಶೆಟ್ಟಿ, ಏಕಾಏಕಿ ಆಕ್ರೋಶ ವ್ಯಕ್ತಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 'ನನ್ನ ವಿರುದ್ಧವೇ ವರದಿ ಪ್ರಕಟಿಸುತ್ತೀಯಾ?' ಎಂದು ಬೆದರಿಕೆ ಹಾಕಿ, ಪತ್ನಿಯ ಎದುರಲ್ಲೇ ಶ್ರೀಕಾಂತ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.