ಕೊರೋನಾ ಜಾಗೃತಿಗೆ ಬೃಹತ್ ಗಾತ್ರದ ಮಾಸ್ಕ್: ಇಲ್ಲಿವೆ ಫೋಟೋಸ್

Suvarna News   | Asianet News
Published : Jun 19, 2020, 10:05 AM ISTUpdated : Jun 19, 2020, 10:08 AM IST

ಉಡುಪಿಯ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಿ, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು. ಇಲ್ಲಿವೆ ಫೊಟೋಸ್

PREV
18
ಕೊರೋನಾ ಜಾಗೃತಿಗೆ ಬೃಹತ್ ಗಾತ್ರದ ಮಾಸ್ಕ್: ಇಲ್ಲಿವೆ ಫೋಟೋಸ್

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಲಾಯಿತು.

ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕೊರೊನಾ ನಿಯಂತ್ರಣದಂಗವಾಗಿ ನಡೆದ ಮಾಸ್ಕ್ ದಿನಾಚರಣೆ ಕಾರ್ಯಕ್ರಮದಲ್ಲಿ ಬೃಹತ್ ಗಾತ್ರದ ಮಾಸ್ಕ್ ಪ್ರದರ್ಶಿಸಲಾಯಿತು.

28

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಯಿತು.

38

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಇದ್ದರು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಇದ್ದರು

48

ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಅನಿವಾರ್ಯ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮತ್ತು ಇತರ ಆರೋಗ್ಯ ದೃಷ್ಟೀಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು. 

ಕೊರೊನಾ ಸೋಂಕು ಸಮುದಾಯಕ್ಕೆ ಹರಡದಂತೆ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಅನಿವಾರ್ಯ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮತ್ತು ಇತರ ಆರೋಗ್ಯ ದೃಷ್ಟೀಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು ಎಂದು ಹೇಳಿದರು. 

58

6 ಅಡಿ ಉದ್ದ ಮತ್ತು 5 ಅಡಿ ಅಗಲದ ಹತ್ತಿಬಟ್ಟೆಯ ಮಾಸ್ಕ್ ಪ್ರದರ್ಶನಕ್ಕೆ ಚಾಲನೆ ನೀಡಿದರು.

6 ಅಡಿ ಉದ್ದ ಮತ್ತು 5 ಅಡಿ ಅಗಲದ ಹತ್ತಿಬಟ್ಟೆಯ ಮಾಸ್ಕ್ ಪ್ರದರ್ಶನಕ್ಕೆ ಚಾಲನೆ ನೀಡಿದರು.

68

ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಈ ಬಟ್ಟೆಯಲ್ಲಿ ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ಈ ಬೃಹತ್ ಮಾಸ್ಕ್ ತಯಾರಿಸಿದದ್ದರು.

ಸಾಯಿರಾಂ ಬಟ್ಟೆ ಮಳಿಗೆಯವರು ಉಚಿತವಾಗಿ ಒದಗಿಸಿದ ಈ ಬಟ್ಟೆಯಲ್ಲಿ ಕ್ಲಾಸಿಕ್ ಟಚ್ ಟೈಲರ್ಸ್ ತಂಡದವರು ಈ ಬೃಹತ್ ಮಾಸ್ಕ್ ತಯಾರಿಸಿದದ್ದರು.

78

ರಸ್ತೆ ಪಕ್ಕ ಈ ಮಾಸ್ಕ್ ಪ್ರದರ್ಶನದ ಮೂಲಕ ಸಾರ್ವಜನಿಕರ ಗಮನ ಸೆಳೆದು, ಕಡ್ಡಾಯವಾಗಿ ಮಾಸ್ಕ್ ಬಳಸುವ ಜಾಗೃತಿ ಮೂಡಿಸಲಾಯಿತು.

ರಸ್ತೆ ಪಕ್ಕ ಈ ಮಾಸ್ಕ್ ಪ್ರದರ್ಶನದ ಮೂಲಕ ಸಾರ್ವಜನಿಕರ ಗಮನ ಸೆಳೆದು, ಕಡ್ಡಾಯವಾಗಿ ಮಾಸ್ಕ್ ಬಳಸುವ ಜಾಗೃತಿ ಮೂಡಿಸಲಾಯಿತು.

88

 ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು. 

 ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು. 

click me!

Recommended Stories