ಬಂಡೆ ಕೊರೆದ ಜಾಗದಲ್ಲೇ ಜಲಪಾತಗಳ ಉಗಮ!
ರಾಷ್ಟ್ರೀಯ ಹೆದ್ದಾರಿ 66ರ (National Highway 66) ಚತುಷ್ಪಥ ರಸ್ತೆ ಕಾಮಗಾರಿಗಾಗಿ ಕಾರವಾರ ಮತ್ತು ಅಂಕೋಲಾ ಭಾಗದಲ್ಲಿ ಬೃಹತ್ ಬಂಡೆಗಳನ್ನು ಮತ್ತು ಗುಡ್ಡಗಳನ್ನು ಅವೈಜ್ಞಾನಿಕವಾಗಿ ಕೊರೆಯಲಾಗಿದೆ. ಈಗ ಸುರಿಯುತ್ತಿರುವ ಮಳೆಗೆ ಈ ಕೊರೆದ ಬಂಡೆಗಳ ಮೇಲಿಂದ ನೀರು ಧುಮ್ಮಿಕ್ಕುತ್ತಿದ್ದು, ಜಲಪಾತದಂತೆ ಗೋಚರಿಸುತ್ತಿದೆ. ಇದನ್ನು ನೋಡಲು ಮುಗಿಬೀಳುತ್ತಿರುವ ಪ್ರವಾಸಿಗರು, ಹೆದ್ದಾರಿ ಪಕ್ಕದಲ್ಲೇ ವಾಹನ ನಿಲ್ಲಿಸಿ ನೀರಾಟ ಆಡುತ್ತಿದ್ದಾರೆ.