ಅರಣ್ಯ ಇಲಾಖೆ ವಿರುದ್ಧ ಆಕ್ರೋಶ - ಪರಿಹಾರಕ್ಕೆ ಆಗ್ರಹ:
ಕೂಡ್ಲಿಗಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಕಾಡುಹಂದಿ, ಕರಡಿ ಹಾಗೂ ಇತರೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಿಂಬಳಗೇರಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತ ವೀರೇಶ್ಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಮತ್ತು ರೈತ ಸಂಘಟನೆಗಳು ಆಗ್ರಹಿಸಿವೆ.