ಬದುಕುಳಿದ ಶಿವರಾಜ್ ಹೇಳಿಕೆ:
ಅಪಘಾತದಲ್ಲಿ ಬದುಕುಳಿದ ಶಿವರಾಜ್ ಮಾತನಾಡಿ, 'ನಾವು ರಾತ್ರಿ 11 ಗಂಟೆಗೆ ಧಾರವಾಡದಿಂದ ಹೊರಟಿದ್ದೆವು. ನಾವೆಲ್ಲರೂ ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದೆವು. ಘಟನೆಯ ಸಮಯದಲ್ಲಿ ನಾನು ಮಲಗಿದ್ದೆ, ಒಮ್ಮೆಲೇ ಜೋರಾಗಿ ಶಬ್ದವಾಯಿತು. ಕಣ್ಣು ಬಿಟ್ಟು ನೋಡಿದಾಗ ಅಪಘಾತವಾಗಿತ್ತು. ನಾನು ಮತ್ತು ಚನ್ನಬಸು ಮಾತ್ರ ಬದುಕಿದ್ದೇವೆ, ಉಳಿದವರೆಲ್ಲಾ ನಮ್ಮ ಕಣ್ಣ ಮುಂದೆಯೇ ಪ್ರಾಣ ಬಿಟ್ಟರು' ಎಂದು ಕಣ್ಣೀರಿಟ್ಟಿದ್ದಾರೆ.
ಇನ್ನು ಸ್ಥಳೀಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳನ್ನು ವಿಚಾರಿಸಿದ್ದಾರೆ. ಜೊತೆಗೆ, ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.