ಮರಳಿ ಮಣ್ಣಿಗೆ..! ಕೆಸರಗದ್ದೆಯಲ್ಲಿ ಯುವಕರ ದಂಡು, ಭತ್ತದ ಗದ್ದೇಲಿ ಫುಲ್ ಬ್ಯುಸಿ

First Published Jul 7, 2020, 11:24 AM IST

ಕೊರೋನಾ ಮಹಾಮಾರಿಯಿಂದ ಉದ್ಯೋಗಕ್ಕೆ ಕುತ್ತು ಬಂದು ಯುವಕರೆಲ್ಲ ಹಳ್ಳಿಯತ್ತ ಮುಖ ಮಾಡಿದ್ದಾರೆ. ಕೆಲಸ ಹೋಯ್ತು ಅಂತ ಸುಮ್ಮನೆ ಕೂರಲಿಲ್ಲ.. ಹಿರಿಯರೊಂದಿಗೆ ಉತ್ಸಾದಿಂದ ಗದ್ದೆಯತ್ತ ಹೆಜ್ಜೆ ಹಾಕಿದ್ದಾರೆ. ಭತ್ತದ ಗದ್ದೆಯಲ್ಲಿ ಹಿರಿಯರೊಂದಿಗೆ ಯಂಗ್ ಬಾಯ್ಸ್ ಮೈಬಗ್ಗಿಸಿ ದುಡಿಯುತ್ತಿದ್ದಾರೆ. ಇಲ್ಲಿವೆ ಫೋಟೋಸ್

ಅವರೆಲ್ಲಾ ಹಳ್ಳಿಯಿಂದ ನಗರಕ್ಕೆ ಬಂದು ಉದ್ಯೋಗ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದವರು. ಇನ್ನು ಕೆಲವರು ಸ್ವಂತ ಉದ್ಯೋಗದ ಹೆಸರಲ್ಲಿ ಜೀವನ ಸಾಗಿಸ್ತಿದ್ದ ಯುವಕರು. ಈಗ ಎಲ್ಲರೂ ಕೃಷಿಯಲ್ಲಿ ತೊಡಗಿದ್ದಾರೆ
undefined
ಜಗತ್ತನ್ನೇ ಕಾಡಿದ ಮಹಾಮಾರಿ ಕೊರೋನಾ ಕಾರಣದಿಂದ ಹಲವರ ಉದ್ಯೋಗಕ್ಕೆ ಕುತ್ತು ಬಂದ್ರೆ, ಇನ್ನೊಂದಷ್ಟು ಜನರ ಉದ್ಯಮವೇ ನಷ್ಟಕ್ಕೆ ಸಿಲುಕಿ ತತ್ತರಿಸಿದೆ.
undefined
ಈಗ ಪಟ್ಟಣದ ಯುವಕರು ಕೃಷಿ ಬದುಕಿನತ್ತ ಮುಖ ಮಾಡಿದ್ದಾರೆ. ಹಳ್ಳಿಯಲ್ಲಿ ರೈತನಾಗಿಯೇ ಇರೋದು ವಾಸಿ ಅಂತ ಗದ್ದೆ ಕೆಲಸಕ್ಕೆ ಇಳಿದಿದ್ದಾರೆ
undefined
ಭತ್ತದ ಗದ್ದೆಗಳಲ್ಲಿ ದೈವದ ಗುಡಿಗಳು
undefined
ವಿಶಾಲವಾದ ಭತ್ತದ ಗದ್ದೆಯ ನೋಟ, ನಡು ನಡುವೆ ತೆಂಗಿನ ಮರಗಳು
undefined
ಗ್ರಾಮೀಣ ಮಹಿಳೆಯರೂ ನೇಜಿ ನೆಡೋದ್ರಲ್ಲಿ ಫುಲ್ ಬ್ಯುಸಿ
undefined
ಗದ್ದೆ ಉಳುಮೆ ಮಾಡುತ್ತಿರುವ ಯುವಕರು
undefined
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಗ್ರಾಮದ ನೂರ್ತಾಡಿ ಗುತ್ತಿನ ಮನೆ.ಹಲವಾರು ವರ್ಷಗಳಿಂದ ಇಲ್ಲಿನ ಹತ್ತಾರು ಕುಟುಂಬಗಳಿಗೆ ಕೃಷಿಯೇ ಜೀವನದ ಆಧಾರ.
undefined
ಕೃಷಿ ಕೆಲಸದೊಂದಿಗೆ, ದೈವ, ಸಸ್ಕೃತಿ ಎಲ್ಲವೂ ಒಂದಕ್ಕೊಂದರ ಕೊಂಡಿಯಂತೆ ಬೆಸೆದುಕೊಂಡ ಹಳ್ಳಿ ಕೃಷಿ ಜೀವನ
undefined
ಮನೆಯ ಮಕ್ಕಳು ಮಾತ್ರ ಆಧುನಿಕತೆಗೆ ಮನ ಸೋತು ಕೃಷಿ ಬದುಕಿನತ್ತ ಮನಸ್ಸು ಮಾಡದೇ ನಗರ ಜೀವನ ಹರಸಿ ಸಿಟಿಯತ್ತ ಹೊರಟವರು. ರೈತರ ಮನೆಯಲ್ಲೇ ಹುಟ್ಟಿದರೂ ಉದ್ಯೋಗ, ಉದ್ಯಮ ಅಂತ ಹೋದವರು.
undefined
ಹೀಗಾಗಿ ಎಕರೆಗಟ್ಟಲೇ ಕೃಷಿ ಭೂಮಿಯಲ್ಲಿ ಆ ಊರಿನ ಹಿರಿಯರೇ ಇಂದಿಗೂ ಕೃಷಿ ಮಾಡಿಕೊಂಡು ಬರ್ತಿದ್ದಾರೆ.
undefined
ಆದ್ರೆ ಈ ಬಾರಿ ಮಾತ್ರ ಕೃಷಿ ಗದ್ದೆಗಳಲ್ಲಿ ಮನೆಯ ಹಿರಿಯರ ಜೊತೆ ಯುವಕರ ದಂಡು ಕೂಡ ಇತ್ತು.
undefined
ಯುವಕರು ಕೃಷಿಯಿಂದ ವಿಮುಖರಾಗ್ತಿರೋ ಕಾಲದಲ್ಲಿ ನೂರ್ತಾಡಿಯ ಯುವಕರು ಮತ್ತೆ ಗದ್ದೆಗೆ ಇಳಿದ್ದಾರೆ.
undefined
ಮನೆಯ ಹಿರಿಯರ ಜೊತೆ ಸೇರಿಕೊಂಡು ಕೃಷಿ ಕಾರ್ಯ ‌ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಬೇರೆ ಉದ್ಯೋಗ, ಸ್ವಂತ ಉದ್ಯಮ ಅಂತ ಹೋಗ್ತಿದ್ದ ಯುವಕರಲ್ಲಿ ಕೃಷಿಯತ್ತ ಒಲವು ಮೂಡಿದೆ.
undefined
ಗದ್ದೆಯನ್ನ ಹೂಳೂತ್ತಾ, ಕೆಸರಿನಲ್ಲಿ ಕೃಷಿ ಕಾರ್ಯ ಮಾಡ್ತಾ ಹತ್ತಾರು ಯುವಕರ ತಂಡ ಅಕ್ಷರಶಃ ರೈತರಾಗಿ ಬದಲಾಗಿದ್ರು.ಮನೆಯ ಹಿರಿಯರ ಮಾರ್ಗದರ್ಶನದಂತೆ ಕೋಣಗಳನ್ನು ಹಿಡಿದು ಎಕರೆಗಟ್ಟಲೇ ಗದ್ದೆಯನ್ನು ಹೂಳುವ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ಪೈರು ನೆಟ್ಟು ಸಮೃದ್ದ ಕೃಷಿಗೆ ಮುನ್ನುಡಿ ಬರೆದಿದ್ದಾರೆ. ಈ ಮೂಲಕ ಅಪ್ಪಟ ರೈತನಿಗೆ ಕೃಷಿಯೇ ಜೀವನಕ್ಕೆ ಆಧಾರ ಅಂತ ತೋರಿಸಿಕೊಟ್ಟಿದ್ದಾರೆ
undefined
ಯುವಕರಲ್ಲಿ ಹಲವರು ಕೃಷಿ ಭೂಮಿಯಿದ್ದರೂ ಬದುಕು ಸಾಗಿಸೋಕೆ ಇತರೆ ಕೂಲಿ ಕೆಲಸ, ಕಟ್ಟಡ ಕಾಂಟ್ರಾಕ್ಟ್ ಸೇರಿದಂತೆ ಬೇರೆ ಬೇರೆ ಉದ್ಯೋಗಗಳನ್ನ ಮಾಡಿಕೊಂಡು ಇದ್ದವರು.
undefined
ಊರಲ್ಲಿ ಕೃಷಿ ಭೂಮಿ ಇದ್ದರು ಅದರತ್ತ ಒಲವು ಕೊಂಚ ಕಡಿಮೆಯೇ ಇತ್ತು. ಪರಿಣಾಮ ಕೃಷಿ ಭೂಮಿಗಳಲ್ಲಿ ಸಂಪ್ರದಾಯದಂತೆ ಮನೆಯ ಹಿರಿಯರೇ ಕೆಲಸ ಮಾಡ್ತಿದ್ರು.
undefined
ಸದ್ಯ ನಗರದಲ್ಲಿ ಕೆಲಸವಿಲ್ಲ, ಈ ಮಧ್ಯೆ ಕೊರೋನಾ ಭೀತಿಯ ಕಾರಣಕ್ಕೆ ನಗರಗಳಿಗೆ ಬಂದು ಕೆಲಸ ಮಾಡೋದು ಕೂಡ ಆತಂಕ. ಹೀಗಾಗಿ ಹಲವಾರು ದಿನಗಳಿಂದ ಮನೆಯಲ್ಲೇ ಇದ್ದ ಯುವಕರ ತಂಡ ಗದ್ದೆಗಿಳಿದು ಕೃಷಿ ಮಾಡಿದೆ.
undefined
click me!