ಹೌದು. ಸೌಹಾರ್ದತೆ ಸಾರುವ ಉದ್ದೇಶದಿಂದ ಮುಸ್ಲಿಮರ ಹಬ್ಬಗಳಲ್ಲಿ ಹಿಂದೂಗಳು, ಹಿಂದೂಗಳ ಹಬ್ಬವನ್ನು ಮುಸ್ಲಿಮರು ಆಚರಿಸುವುದನ್ನು ನೋಡಿರುತ್ತೀರಿ. ಅಂತಹದ್ದೇ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ತನ್ವಿ ಅರಸಾಳು ಎಂಬ ಯುವಕ ಲಕ್ಷ್ಮೀ ಪೂಜೆ ಮಾಡಿದ್ದಾರೆ. ಅಂದಹಾಗೆ ಈ ರೀತಿ ಹಿಂದೂಗಳ ಹಬ್ಬ ಮಾಡುತ್ತಿರುವುದು ಇದೇ ಮೊದಲಲ್ಲ, ಕಳೆದ ಐದು ವರ್ಷಗಳಿಂದಲೇ ಪ್ರತಿವರ್ಷ ದೀಪಾವಳಿ ಸಮಯದಲ್ಲಿ ಲಕ್ಷ್ಮೀ ಪೂಜೆ ನಡೆಸಿಕೊಂಡು ಬಂದಿದ್ದಾರೆ.