ಅದಕ್ಕಾಗಿ ನಿರ್ದೇಶಕರಿಗೆ ಮೆಚ್ಚುಗೆ ಸಲ್ಲಬೇಕು. ಅವರು ಮೊದಲಾರ್ಧವನ್ನು ಬಹಳ ವೇಗವಾಗಿ ಹೇಳಿಕೊಂಡು ಹೋಗಿದ್ದಾರೆ. ದ್ವಿತೀಯಾರ್ಧದಲ್ಲಿ ಸಂಯಮದಿಂದ ಬಿಟ್ಟ ಸ್ಥಳ ತುಂಬುತ್ತಾ ಹೋಗಿದ್ದಾರೆ. ಜೊತೆಗೆ ಒಬ್ಬ ಪರಿಪೂರ್ಣ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿರುವ ಶ್ರೀಮುರಳಿ ನಿಜಕ್ಕೂ ಅಭಿನಂದನಾರ್ಹರು. ಮಾತು ಕಮ್ಮಿ, ಆ್ಯಕ್ಷನ್ ಜಾಸ್ತಿ. ಕಟುತ್ವ, ಪ್ರಾಮಾಣಿಕತೆ, ಅಸಹಾಯಕತೆ ಎಲ್ಲವನ್ನೂ ಮನ ಮುಟ್ಟುವಂತೆ ದಾಟಿಸಿದ್ದಾರೆ.