ನಟ ಜಗ್ಗೇಶ್ ಅವರು ಪೊಲೀಸರ ಕಾರ್ಯತತ್ಪರತೆಗೆ ಮೆಚ್ಚುಗೆ ಸೂಚಿಸಿ ತಮ್ಮ ಟ್ವೀಟ್ನಲ್ಲಿ ಮಲ್ಲೇಶ್ವರಂ ಠಾಣೆಯ ಸಿಪಿಐ ಹಾಗೂ ಸಿಬ್ಬಂದಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಜೊತೆಗೆ, 'ಸಿಕ್ಕ ವಸ್ತುಗಳನ್ನು ಠಾಣೆಗೆ ಒಪ್ಪಿಸಿ' ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಆದರೆ ಈ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟುವುದಕ್ಕೆ ಕಾರಣವಾಗಿದೆ. ಪೊಲೀಸರಿಂದ ಎಲ್ಲ ಜನಸಾಮಾನ್ಯರಿಗೂ ಇದೇ ರೀತಿಯ ಸೇವೆ ಸಿಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ನಟ ಜಗ್ಗೇಶ್ ಅವರ ಪೋಸ್ಟ್ಗೆ ಕಾಮೆಂಟ್ ಮಾಡುತ್ತಾ, ತಮ್ಮ ಸ್ವಂತ ಅನುಭವಗಳನ್ನೂ ಹಂಚಿಕೊಂಡಿದ್ದಾರೆ.