ಪ್ರಥಮ ಬಹುಮಾನ ವಿಜೇತ ತಂಡಕ್ಕೆ 5 ಲಕ್ಷ ರು. ಹಾಗೂ ಪ್ರಶಸ್ತಿ ಪತ್ರ ಜೊತೆಗೆ ಈ ತಂಡ ಬಹರೇನ್ನ ರಾಷ್ಟ್ರೀಯ ಉತ್ಸವದಲ್ಲಿ ಭಾಗವಹಿಸುವ ಅವಕಾಶ ಪಡೆಯಲಿದೆ. ಪಿಲಿನಲಿಕೆಗೆ ಮೆರುಗು ನೀಡಲು ಹೆಸರಾಂತ ನಟರಾದ ರಿಷಬ್ ಶೆಟ್ಟಿ, ಡಾಲಿ ಧನಂಜಯ್, ರಾಜ್ ಬಿ ಶೆಟ್ಟಿ, ಬಾಲಿವುಡ್ ನಟ ಸಂಜಯ್ ದತ್, ಕ್ರಿಕೆಟ್ ತಾರೆ ಶಿವಂ ದುಬೆ ಅವರನ್ನು ಆಹ್ವಾನಿಸಲಾಗಿತ್ತು.