ಅಭಿವ್ಯಕ್ತಿ ಸ್ವಾತಂತ್ರ್ಯ ಮಹತ್ವದ್ದಾಗಿದ್ದರೂ, ಅದು ಇನ್ನೊಬ್ಬರ ಭಾವನೆಗೆ ಧಕ್ಕೆ ತರುವಂತಿರಬಾರದು. ಈ ಪರಿಸ್ಥಿತಿಗೆ ಕಾರಣನಾಗಿರುವ ನೀವು ಈಗ ಭದ್ರತೆ ಕೋರುತ್ತಿದ್ದೀರಿ. ನೀವು ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿರಬಹುದು, ಆದರೆ ಕನ್ನಡಿಗರ ಭಾವನೆ ಅವುಗಳಿಗಿಂತ ಉನ್ನತವಾದದ್ದು, ಕಮಲ್ ಹಾಸನ್ ಅವರು ಸಾಮಾನ್ಯ ವ್ಯಕ್ತಿಯಲ್ಲ, ಅವರು ಸಾರ್ವಜನಿಕ ವ್ಯಕ್ತಿ. ಅವರು ತಮ್ಮ ಹೇಳಿಕೆಗೆ ಕ್ಷಮೆ ಕೇಳುತ್ತಿಲ್ಲ, ಬದಲಿಗೆ ಹೇಳಿದ್ದು ಸರಿಯೆಂದು ಮತ್ತೊಮ್ಮೆ ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆಗಳಿಂದ ಕನ್ನಡದ ಭಾವನೆಗೆ ಧಕ್ಕೆ ತರೋದನ್ನ ಒಪ್ಪುವುದಿಲ್ಲ. ಹೀಗಿದ್ದರೆ, ಕರ್ನಾಟಕ ಯಾಕೆ ನಿಮಗೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.