ರಾಜ್ಯದಲ್ಲಿ ಮಳೆಯಬ್ಬರ, ಕೊಚ್ಚಿ ಹೋಗುತ್ತಿದೆ ಬದುಕು!: ಮನಕಲಕುವ ಚಿತ್ರಗಳು
First Published Aug 6, 2019, 4:22 PM ISTಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಮನೆ-ಮಠಗಳಿಗೆ ನೀರು ನುಗ್ಗಿ ಜನರು ಬೇರೆ ದಾರಿ ಇಲ್ಲದೇ ನಿರಾಶ್ರಿತರ ಕೇಂದ್ರಕ್ಕೆ ತೆರಳುತ್ತಿದ್ದಾರೆ. ವರುಣನ ಆರ್ಭಟಕ್ಕೆ ಕೆಲವೆಡೆ ಮನೆಗೋಡೆ ಕುಸಿದಿದ್ದರೆ, ಮತ್ತೆ ಕೆಲವೆಡೆ ರಸ್ತೆಗಳೇ ಬಿರುಕು ಬಿಟ್ಟಿವೆ. ಮೂರು ತಿಂಗಳಿಂದ ಮಳೆ ಇಲ್ಲದೇ ಕಂಗಾಲಾಗಿದ್ದ ಜನರು ಇಂದು ಮಳೆಯಬ್ಬರಕ್ಕೆ ನಿರಾಶ್ರಿತರಾಗಿದ್ದಾರೆ. ಮಳೆಯಬ್ಬರ ಸೃಷ್ಟಿಸಿದ ಅವಾಂತರ ಕ್ಯಾಮೆರಾ ಕಣ್ಣಿನಲ್ಲಿ ಕಂಡಿದ್ದು ಹೀಗೆ