ಆಂಧ್ರ ಗಡಿಗೆ ಗೋಡೆ ಕಟ್ಟಿದ ತಮಿಳುನಾಡು!

Published : Apr 28, 2020, 09:20 AM IST

ಒಂದೆಡೆ ಕೇರಳ ಗಡಿಯನ್ನು ಮುಚ್ಚಿದ್ದ ದಕ್ಷಿಣ ಕನ್ನಡದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಸಿಎಂ ಪಿಣರಾಯಿ ಈಗ ಖುದ್ದು ಗಡಿ ಮುಚ್ಚಲು ಆದೇಶಿಸಿದ್ದಾರೆ. ಹೀಗಿರುವಾಗ ಅತ್ತ ತಮಿಳುನಾಡು ಕೂಡಾ ಅಕ್ರಮ ವಲಸಿಗರ ಸಂಚಾರ ತಡೆಯುವ ನಿಟ್ಟಿನಲ್ಲಿ ತಮಿಳುನಾಡಿನ ವೆಲ್ಲೂರು ಜಿಲ್ಲಾಡಳಿತವು ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಗೋಡೆ ನಿರ್ಮಿಸಿ ತಾತ್ಕಾಲಿಕವಾಗಿ ಮುಚ್ಚಿದ್ದಾರೆ.

PREV
17
ಆಂಧ್ರ ಗಡಿಗೆ ಗೋಡೆ ಕಟ್ಟಿದ ತಮಿಳುನಾಡು!

ಕೊರೋನಾ ಅಟ್ಟಹಾಸಕ್ಕೆ ಸೋಂಕಿತರ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಹೇರಿದೆ.

ಕೊರೋನಾ ಅಟ್ಟಹಾಸಕ್ಕೆ ಸೋಂಕಿತರ ಸಂಖ್ಯೆ  ದಿನೇ ದಿನೇ ಹೆಚ್ಚುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಹೇರಿದೆ.

27

ಹೀಗಿದ್ದರೂ ಜನ ಸಾಮಾನ್ಯರ ಓಡಾಟಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ. ಹೀಗಿರುವಾಗ ಅಕ್ರಮ ವಲಸಿಗರ ಸಂಚಾರ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಗಡಿಯಲ್ಲಿ ಗೋಡೆ ನಿರ್ಮಿಸಿದೆ.

ಹೀಗಿದ್ದರೂ ಜನ ಸಾಮಾನ್ಯರ ಓಡಾಟಕ್ಕೆ ಮಾತ್ರ ಕಡಿವಾಣ ಬಿದ್ದಿಲ್ಲ. ಹೀಗಿರುವಾಗ ಅಕ್ರಮ ವಲಸಿಗರ ಸಂಚಾರ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಗಡಿಯಲ್ಲಿ ಗೋಡೆ ನಿರ್ಮಿಸಿದೆ.

37

ಹೌದು  ತಮಿಳುನಾಡಿನ ವೆಲ್ಲೂರು ಜಿಲ್ಲಾಡಳಿತವು ಆಂಧ್ರಪ್ರದೇಶ ಗಡಿ ರಸ್ತೆಯಲ್ಲಿ ತಾತ್ಕಾಲಿಕ ತಡೆಗೋಡೆಯೊಂದನ್ನು ನಿಲ್ಲಿಸಿದೆ.

ಹೌದು  ತಮಿಳುನಾಡಿನ ವೆಲ್ಲೂರು ಜಿಲ್ಲಾಡಳಿತವು ಆಂಧ್ರಪ್ರದೇಶ ಗಡಿ ರಸ್ತೆಯಲ್ಲಿ ತಾತ್ಕಾಲಿಕ ತಡೆಗೋಡೆಯೊಂದನ್ನು ನಿಲ್ಲಿಸಿದೆ.

47

ಆಂಧ್ರದೊಂದಿಗೆ ಗಡಿ ಹೊಂದಿರುವ ಸೈನಗುಂಡ ಮತ್ತು ಪೊನ್ನಾಯ್‌ ಪ್ರದೇಶದಲ್ಲಿ ಹಾಲೋಬ್ಲಾಕ್‌ ಬಳಸಿ ಈ ಗೋಡೆ ನಿರ್ಮಿಸಲಾಗಿದೆ.

ಆಂಧ್ರದೊಂದಿಗೆ ಗಡಿ ಹೊಂದಿರುವ ಸೈನಗುಂಡ ಮತ್ತು ಪೊನ್ನಾಯ್‌ ಪ್ರದೇಶದಲ್ಲಿ ಹಾಲೋಬ್ಲಾಕ್‌ ಬಳಸಿ ಈ ಗೋಡೆ ನಿರ್ಮಿಸಲಾಗಿದೆ.

57

ಉಭಯ ರಾಜ್ಯಗಳ ನಡುವೆ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈಗಾಗಲೇ ಸಂಚಾರಕ್ಕೆ ಅವಕಾಶ ಇದ್ದು, ಅಲ್ಲಿ ಸರಕು ಸಾಗಣೆ ವಾಹನಗಳಿಗೆ ಸಂಚಾರಕ್ಕೆ ಮುಕ್ತ ಅವಕಾಶ ಇದೆ. 

ಉಭಯ ರಾಜ್ಯಗಳ ನಡುವೆ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಈಗಾಗಲೇ ಸಂಚಾರಕ್ಕೆ ಅವಕಾಶ ಇದ್ದು, ಅಲ್ಲಿ ಸರಕು ಸಾಗಣೆ ವಾಹನಗಳಿಗೆ ಸಂಚಾರಕ್ಕೆ ಮುಕ್ತ ಅವಕಾಶ ಇದೆ. 

67

ಆದರೆ ಕುಗ್ರಾಮಗಳಿಗೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ಅಕ್ರಮ ಸಂಚಾರ ಮುಂದುವರೆದಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

ಆದರೆ ಕುಗ್ರಾಮಗಳಿಗೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ಅಕ್ರಮ ಸಂಚಾರ ಮುಂದುವರೆದಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಡಳಿತ ಹೇಳಿದೆ.

77

ಇನ್ನು ಕೊರೋನಾ ವೈರಸ್ ಪ್ರಕರಣ ವರದಿಯಾದ ಆರಂಭದಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಕ್ರಮ ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ಕೇರಳಕ್ಕೆ ಸಂಪರ್ಕಿಸುತ್ತಿದ್ದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿತ್ತು. ಇದನ್ನು ವಿರೋಧಿಸಿ ಕೇರಳ ಸುಪ್ರೀಂ ಮೆಟ್ಟಿಲೇರಿತ್ತು. ಆದರಡ ಇದೀಗ ಕೇರಳವೇ ಗಡಿಯನ್ನು ಮುಚ್ಚಿದೆ ಎಂಬುವುದು ಉಲ್ಲೇಖನೀಯ.

ಇನ್ನು ಕೊರೋನಾ ವೈರಸ್ ಪ್ರಕರಣ ವರದಿಯಾದ ಆರಂಭದಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಕ್ರಮ ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ಕೇರಳಕ್ಕೆ ಸಂಪರ್ಕಿಸುತ್ತಿದ್ದ ರಸ್ತೆಯನ್ನು ಮಣ್ಣು ಹಾಕಿ ಮುಚ್ಚಿತ್ತು. ಇದನ್ನು ವಿರೋಧಿಸಿ ಕೇರಳ ಸುಪ್ರೀಂ ಮೆಟ್ಟಿಲೇರಿತ್ತು. ಆದರಡ ಇದೀಗ ಕೇರಳವೇ ಗಡಿಯನ್ನು ಮುಚ್ಚಿದೆ ಎಂಬುವುದು ಉಲ್ಲೇಖನೀಯ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories