ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ನಿಶ್ಚಿತಾರ್ಥ, ಡಿ.22ಕ್ಕೆ ಮದುವೆ 24ಕ್ಕೆ ರಿಸೆಪ್ಶನ್!

Published : Dec 14, 2024, 05:32 PM IST

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿದೆ. ವೆಂಕಟ ದತ್ತಾ ಸಾಯಿ ಜೊತೆಗಿನ ಎಂಗೇಂಜ್‌ಮೆಂಟ್ ಫೋಟೋಗಳು ಭಾರಿ ಸದ್ದು ಮಾಡುತ್ತಿದೆ.  ಪಿವಿ ಸಿಂಧೂ ಕೈಹಿಡಿಯುತ್ತಿರುವ ಹುಡುಗ ಯಾರು? 

PREV
17
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ನಿಶ್ಚಿತಾರ್ಥ, ಡಿ.22ಕ್ಕೆ ಮದುವೆ 24ಕ್ಕೆ ರಿಸೆಪ್ಶನ್!

ಒಲಿಂಪಿಕ್ಸ್ ಪದಕ ವಿಜೇತ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿದೆ. ಪೋಸೆಡೆಕ್ಸ್ ಟೆಕ್ನಾಲಜೀಸ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ವೆಂಕಟ ದತ್ತ ಸಾಯಿ ಜೊತೆ ಸಿಂಧೂ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇದೀಗ ನಿಶ್ಚಿತಾರ್ಥ ಫೋಟೋಗಳು ವೈರಲ್ ಆಗಿದೆ. ಇದರ ಜೊತೆಗೆ ಸಿಂಧೂ ಮದುವೆಯಾಗುತ್ತಿರುವ ಹುಡುಗನ ಕುರಿತು ಮಾಹಿ ಸರ್ಚ್ ನಡೆಯುತ್ತಿದೆ. 

27

ಹೈದರಾಬಾದ್‌ನಲ್ಲಿ ಇಂದು(ಡಿ.14) ನಡೆದ ಅದ್ಧೂರಿ ನಿಶ್ಚಿತಾರ್ಥದ ಸಮಾರಂಭದಲ್ಲಿ ಪಿವಿ ಸಿಂಧೂ ಹಾಗೂ ವೆಂಕಟ ದತ್ತ ಸಾಯಿ ರಿಂಗ್ ಬದಲಾಯಿಸಿದ್ದಾರೆ.ಪಿವಿ ಸಿಂಧೂ ಲೆಹಂಗ ಧರಿಸಿ ಮಿಂಚಿದ್ದಾರೆ. ಇದೇ ವೇಳೆ ಸಿಂಧೂ ನಿಶ್ಚಾರ್ಥ ಕಾರ್ಯಕ್ರಮದಲ್ಲಿ ಮಿಸ್‌ನಿಂದ ಮಿಸೆಸ್ ಬ್ಯಾನರ್ ಸಮಾರಂಭದ ಮೆರುಗು ಹೆಚ್ಚಿಸಿತ್ತು.
 

37

ಡಿಸೆಂಬರ್ 22ರಂದು ಪಿವಿ ಸಿಂಧೂ ವಿವಾಹ ಮಹೋತ್ಸವ ನಡೆಯಲಿದೆ. ಉದಯಪುರದಲ್ಲಿ ಈ ಸಮಾರಂಭ ನಡೆಯಲಿದೆ. ಡಿಸೆಂಬರ್ 20 ರಿಂದ ಮದುವೆ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಮಹೆಂದಿ, ಸಂಗೀತ್ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳು ಉದಯಪುರದಲ್ಲಿ ನಡೆಯಲಿದೆ. ಅದ್ಧೂರಿ ಕಾರ್ಯಕ್ರಮಕ್ಕೆ ಹಲವು ಗಣ್ಯರನ್ನು ಆಹ್ವಾನಿಸಿದೆ.
 

47

ಪಿವಿ ಸಿಂಧೂ ಈಗಾಗಲೇ ಮುದುವೆ ಆಮಂತ್ರಣ ಪತ್ರಿಕೆ ನೀಡುತ್ತಿದ್ದರೆ. ಹಲವು ಗಣ್ಯರನ್ನು ಸಿಂಧೂ ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ. ಈ ಪೈಕಿ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನು ಆಹ್ವಾನಿಸಲಾಗಿದೆ. ಇದರ ಜೊತೆಗೆ ಕೆಲ ಬಾಲಿವುಡ್ ಸೆಲೆಬ್ರೆಟಿಗಳು ಮದುವೆಗೆ ಆಗಮಿಸುವ ಸಾಧ್ಯತೆ ಇದೆ.
 

57
PV Sindhu

ಡಿಸೆಂಬರ್ 22ರಂದು ಉದಯಪುರದಲ್ಲಿ ಮದುವೆ ನಡೆದರೆ, ಡಿಸೆಂಬರ್ 24ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ. ಹೈದರಾಬಾದ್‌ನ ಖಾಸಗಿ ಹೊಟೆಲ್‌ನಲ್ಲಿ ಅದ್ಧೂರಿ ರಿಸೆಪ್ಶನ್ ಕಾರ್ಯಕ್ರಮ ನಡೆಯಲಿದೆ ಎಂದು ಪಿವಿ ಸಿಂಧೂ ತಂದೆ ಪಿವಿ ರಮಣ ಹೇಳಿದ್ದಾರೆ. 
 

67

ಮದುವೆಯಾದ ಬೆನ್ನಲ್ಲೇ ಪಿವಿ ಸಿಂಧೂ  ಪ್ರತಿಷ್ಠಿತ ಟೂರ್ನಿಗೆ ತಯಾರಿ ಆರಂಭಿಸಲಿದ್ದಾರೆ. ಕಾರಣ  ಮಲೇಷಿಯಾ ಓಪನ್ ಸೂಪರ್ 1000 ಟೂರ್ನಿಯಲ್ಲಿ ಪಿವಿ ಸಿಂಧೂ ಪಾಲ್ಗೊಳ್ಳಬೇಕಿದೆ. ಜನವರಿ 7 ರಿಂದ ಟೂರ್ನಿ ಆರಂಭಗೊಳ್ಳುತ್ತಿದೆ. ಹೀಗಾಗಿ ಪಿವಿ ಸಿಂಧೂ ಮದುವೆ ಹಾಗೂ ರಿಸೆಪ್ಶನ್ ಬೆನ್ನಲ್ಲೇ ಮಲೇಷಿಯಾ ಟೂರ್ನಿಗೆ ಸಜ್ಜಾಗಲಿದ್ದಾರೆ ಎಂದು ಪಿವಿ ರಮಣ ಹೇಳಿದ್ದಾರೆ.
 

77

ಲಖನೌದಲ್ಲಿ ನಡೆದ ಸೈಯದ್ ಮೋದಿ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಕೆಲ ವರ್ಷಗಳ ಕೊರಗು ನೀಗಿಸಿದ್ದರು. ಇದೀಗ ಮಲೇಷಿಯಾ ಟೂರ್ನಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. 
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories