ಉತ್ತಮ ವಿಚಾರಕ್ಕೆ ಧ್ವನಿ ಎತ್ತದಿದ್ದರೆ, ಇದ್ದೂ ಸತ್ತಂತೆ: ಮೋದಿಗೆ ವಿಜೇಂದರ್ ಪಂಚ್!

First Published Dec 10, 2020, 6:03 PM IST

ದೆಹಲಿಯ ಗಡಿ ಭಾಗದಲ್ಲಿ ನಡೆಯತ್ತಿರುವ ರೈತರ ಪ್ರತಿಭಟನೆಗೆ ಸೆಲೆಬ್ರೆಟಿಗಳು, ಕ್ರಿಕೆಟಿಗರು, ಕ್ರೀಡಾಪಟುಗಳು ಕೈಜೋಡಿಸುತ್ತಿದ್ದಾರೆ. ಈ ಮೂಲಕ ಪ್ರತಿಭಟನೆ ಕಾವು ಹೆಚ್ಚಿಸಿದ್ದಾರೆ. ದಿನದಿಂದ ದಿನಕ್ಕೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಭಾರತದ ಬಾಕ್ಸರ್, ಕಾಂಗ್ರೆಸ್ ಪಕ್ಷದ ಸದಸ್ಯ ವಿಜೇಂದರ್ ಸಿಂಗ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಖೇಲ್ ರತ್ನ ವಾಪಸ್ ನೀಡುವುಜಾಗಿ ಕೇಂದ್ರದ ವಿರುದ್ಧ ಗುಡುಗಿದ್ದಾರೆ.

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದೆ. ಇದೀಗ ಬಾಕ್ಸರ್ ವಿಜೇಂದರ್ ಸಿಂಗ್ ರೈತರ ಪ್ರತಿಭಟನೆ ಹೊಸ ವೇಗ ನೀಡಿದ್ದಾರೆ.
undefined
ದೇಶದ ಅನ್ನದಾತ ಸಂಕಷ್ಟದಲ್ಲಿದ್ದಾಗ, ಆತನ ನೆರವಿಗೆ ನಿಲ್ಲಲೇಬೇಕು. ಉತ್ತಮ ವಿಚಾರಕ್ಕೆ ಧ್ವನಿ ಎತ್ತದಿದ್ದರೆ, ಇದ್ದೂ ಸತ್ತಂತೆ ಎಂದು ಕಾಂಗ್ರೆಸ್ ಸದಸ್ಯ, ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ.
undefined
ನಾನು ಹರ್ಯಾಣದ ಪುತ್ರ. ನನ್ನ ರಕ್ತ, ಮನಸ್ಸಿನಲ್ಲಿ ಪಂಜಾಬ್ ಮಿಡಿಯುತ್ತಿದೆ. ರೈತರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು ಕೈಗೂಡುವುದಿಲ್ಲ ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.
undefined
ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳಳಿದೆ. ರೈತರಿಗೆ ಬೆಂಬಲ ನೀಡುವ ಸಲುವಾಗಿ ನಾನು ಖೇಲ್ ರತ್ನ ಪ್ರಶಸ್ತಿ ವಾಪಸ್ ನೀಡಲು ಹಿಂಜರಿಯುವುದಿಲ್ಲ ಎಂದು ಸಿಂಗ್ ಎಚ್ಚರಿಸಿದ್ದಾರೆ.
undefined
ಡಿಸೆಂಬರ್ 6 ರಂದು ದೆಹಲಿ ಹೊರವಲಯದ ಸಿಂಘು ಗಡಿಯಲ್ಲಿ ರೈತರು ನೆಡೆಸುತ್ತಿರುವ ಪ್ರತಿಭಟನೆಯಲ್ಲಿ ವಿಜೇಂದರ್ ಸಿಂಗ್ ಪಾಲ್ಗೊಂಡಿದ್ದರು.
undefined
ನವೆಂಬರ್ 26 ರಿಂದ ರೈತರು ದೆಹಲಿಯ ಗಡಿಯಲ್ಲಿ ಕೇಂದ್ರ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನಿರಾಕರಿಸಲಾಗಿದೆ
undefined
ಬೇಡಿಕೆ ಒಪ್ಪದ ಕೇಂದ್ರಕ್ಕೆ ಪಾಠ ಕಲಿಸಲು ಡಿಸೆಂಬರ್ 8 ರಂದು ಭಾರತ್ ಬಂದ್ ಮಾಡೋ ಮೂಲಕ ರೈತರು ಎಚ್ಚರಿಕೆ ಸಂದೇಶ ರವಾನಿಸಿದ್ದರು.
undefined
ರೈತರಿಗೆ ಸಮಸ್ಯೆಗೆ ಪರಿಹಾರದ ಭರವಸೆ ನೀಡಿರುವ ಕೇಂದ್ರ ಕೃಷಿ ಕಾಯ್ದೆ ಹಿಂಪಡೆದಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಇಷ್ಟೇ ಅಲ್ಲ ನಮ್ಮ ಬೇಡಿಕೆ ಈಡೇರುವ ವರೆಗೆ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ
undefined
ಡಿಸೆಂಬರ್ 12 ರಂದು ದೆಹಲಿ ಹಾಗೂ ಆಗ್ರಾ ಹೆದ್ದಾರಿಗಳನ್ನು ಬಂದ್ ಮಾಡುವುದಾಗಿ ರೈತರು ಘೋಷಿಸಿದ್ದಾರೆ. ಇನ್ನು ರಿಲಾಯನ್ಸ್ ಹಾಗೂ ಅದಾನಿ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ.
undefined
click me!