ದೆಹಲಿಯ ಮಣ್ಣಲ್ಲಿ ಮಣ್ಣಾದ ಕನ್ನಡದ ಮಣ್ಣಿನ ಮಗ ಸುರೇಶ್ ಅಂಗಡಿ

Published : Sep 24, 2020, 06:27 PM ISTUpdated : Sep 24, 2020, 07:10 PM IST

ಕೇಂದ್ರ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ಕನ್ನಡದ ಮಣ್ಣಿನ ಮಗ ದೆಹಲಿಯ ದ್ವಾರಕಾ ಸೆಕ್ಟರ್​ 24ರಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ರುದ್ರಭೂಮಿಯಲ್ಲಿ ಮಣ್ಣಾದರು. ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಹಾಗೂ ಕೋವಿಡ್​ ನಿಯಮದಂತೆ ನೆರವೇರಿಸಲಾಯಿತು.  

PREV
17
ದೆಹಲಿಯ ಮಣ್ಣಲ್ಲಿ ಮಣ್ಣಾದ ಕನ್ನಡದ ಮಣ್ಣಿನ ಮಗ ಸುರೇಶ್ ಅಂಗಡಿ

ರೈಲ್ವೆ ಖಾತೆ ರಾಜ್ಯ ಸಚಿವ (65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.

ರೈಲ್ವೆ ಖಾತೆ ರಾಜ್ಯ ಸಚಿವ (65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.

27

ನವದೆಹಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರಭೂಮಿಯಲ್ಲಿ  ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.

ನವದೆಹಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರಭೂಮಿಯಲ್ಲಿ  ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.

37

ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಯ್ತು

ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವದೊಂದಿಗೆ ಮಾಡಲಾಯ್ತು

47

ಕೋವಿಡ್ ಮಾರ್ಗಸೂಚಿ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.

ಕೋವಿಡ್ ಮಾರ್ಗಸೂಚಿ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.

57


ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಗಳು, ಬೀಗರಾದ ಜಗದೀಶ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು,


ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಗಳು, ಬೀಗರಾದ ಜಗದೀಶ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು,

67

ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಅನಂತರ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್‌ 23ರಂದು ರಾತ್ರಿ ಅವರು ಕೊನೆಯುಸಿರೆಳೆದರು.

ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಪರೀಕ್ಷೆಗೆ ಒಳಗಾಗಿದ್ದ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಅನಂತರ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೆಪ್ಟೆಂಬರ್‌ 23ರಂದು ರಾತ್ರಿ ಅವರು ಕೊನೆಯುಸಿರೆಳೆದರು.

77

ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ-ಸೋಮವ್ವ ದಂಪತಿಯ ಪುತ್ರನಾಗಿ 1955ರ ಜೂನ್ 1ರಂದು ಜನಿಸಿದ್ದವರು ಈಗ ದೆಹಲಿ ಮಣ್ಣಲ್ಲಿ ಮಣ್ಣಾದರು.

ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪ ಗ್ರಾಮದಲ್ಲಿ ಚನ್ನಬಸಪ್ಪ-ಸೋಮವ್ವ ದಂಪತಿಯ ಪುತ್ರನಾಗಿ 1955ರ ಜೂನ್ 1ರಂದು ಜನಿಸಿದ್ದವರು ಈಗ ದೆಹಲಿ ಮಣ್ಣಲ್ಲಿ ಮಣ್ಣಾದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories