ಸೋನಿಯಾ ಗಾಂಧಿ ಬಳ್ಳಾರಿಯಿಂದ, ಇಂದಿರಾ ಗಾಂಧಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿ ಗೆದ್ದಿದ್ದರು. ಹಾಗಾಗಿ ಹೊರಗಿನವರು ಎನ್ನುವುದು ಅಪ್ರಸ್ತುತ ಎಂದು ನುಡಿದರು. ಈ ಲೋಕಸಭಾ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡಬೇಕಿದೆ. ಚುನಾವಣೆಯಲ್ಲಿ ರಾಷ್ಟ್ರೀಯ ಆಧಾರ, ಅಭಿವೃದ್ಧಿ ವಿಚಾರಧಾರೆ ಮೇಲೆ ನಾನು ಮತ ಕೇಳುತ್ತೇನೆ.