ಏಯ್‌ ಕರಿ ಟೋಪಿ MLA ಬಾರಯ್ಯ: ಗಣವೇಷಧಾರಿ ಮುನಿರತ್ನರನ್ನ ಕರೆದ ಡಿಕೆಶಿ; ವೇದಿಕೆ ಮೇಲೆ ಹೈಡ್ರಾಮಾ

Published : Oct 12, 2025, 09:28 AM IST

ಡಿಸಿಎಂ ಡಿಕೆ ಶಿವಕುಮಾರ್ ಅವರ 'ಬೆಂಗಳೂರು ನಡಿಗೆ' ಕಾರ್ಯಕ್ರಮದಲ್ಲಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಸೃಷ್ಟಿಸಿದ್ದಾರೆ. ಸ್ಥಳೀಯ ಶಾಸಕನಾದ ತನಗೆ ಆಹ್ವಾನ ನೀಡಿಲ್ಲ ಮತ್ತು ತನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ವೇದಿಕೆಯಲ್ಲೇ ಧರಣಿ ನಡೆಸಿದರು.

PREV
15
ಡಿಸಿಎಂ ಡಿಕೆ ಶಿವಕುಮಾರ್

ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಹೈಡ್ರಾಮಾ ಮಾಡಿದ್ದಾರೆ. ನಾನು ಸ್ಥಳೀಯ ಶಾಸಕನಾದ್ರು ನನೆಗ ಆಹ್ವಾನ ನೀಡಿಲ್ಲ. ಇದನ್ನು ಕಾಂಗ್ರೆಸ್ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮುನಿರತ್ನ ಅಸಮಾಧಾನ ಹೊರ ಹಾಕಿದ್ದಾರೆ.

25
'ಬೆಂಗಳೂರು ನಡಿಗೆ

ಡಿಕೆ ಶಿವಕುಮಾರ್ ಅವರ 'ಬೆಂಗಳೂರು ನಡಿಗೆ' ಕಾರ್ಯಕ್ರಮಕ್ಕೆ ಮುನಿರತ್ನ ಅವರು ಗಣವೇಷಧಾರಿಯಾಗಿ ಆಗಮಿಸಿದ್ದರು. ಸ್ಥಳೀಯ ಶಾಸಕನಾಗಿ ಸಮಸ್ಯೆಯನ್ನು ಹೇಳಿಕೊಳ್ಳಲು ಬಂದಿದೆ. ನನ್ನನ್ನು ಒದೆಯಲಾಗಿದೆ. ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

35
ಅಸಲಿಗೆ ನಡೆದಿದ್ದೇನು?

ಡಿಕೆ ಶಿವಕುಮಾರ್ ಅವರು ಇಂದು ಮತ್ತಿಕೆರೆಯ ಜೆಪಿ ಪಾರ್ಕ್‌ನಲ್ಲಿ ವಾಕಿಂಗ್ ನಡೆಸಿ ಜನರ ಅಹವಾಲು ಸ್ವೀಕರಿಸಿದ್ದರು. ನಂತರ ಸಂವಾದ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ಶಾಸಕ ಮುನಿರತ್ನ ಜನರ ನಡುವೆಯೇ ಕುಳಿತಿದ್ದರು. ಈ ವೇಳೆ ವೇದಿಕೆ ಮೇಲೆ ಬರುವಂತೆ ಮುನಿರತ್ನ ಅವರನ್ನು ಡಿಕೆ ಶಿವಕುಮಾರ್ ಕರೆಯುತ್ತಾರೆ.

45
ಸಂವಾದ ವೇದಿಕೆ

ಸಂವಾದ ವೇದಿಕೆ ಮೇಲೆ ಬರುತ್ತಿದ್ದಂತೆ ಮಾತನಾಡಿದ ಶಾಸಕ ಮುನಿರತ್ನ, ಇದು ಸಾರ್ವಜನಿಕ ಕಾರ್ಯಕ್ರಮವಾಗಿದ್ದರೂ ಸ್ಥಳೀಯ ಶಾಸಕನಾಗಿರುವ ನನಗೆ ಆಹ್ವಾನ ನೀಡಿಲ್ಲ. ಈ ಭಾಗದ ಸಂಸದ ಮಂಜುನಾಥ್ ಅವರಿಗೂ ಆಹ್ವಾನ ನೀಡಿಲ್ಲ. ಈ ಮೂಲಕ ನಮ್ಮನ್ನು ಅವಮಾನಗೊಳಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಮುಂದೆ ಬೇಸರ ಹೊರ ಹಾಕಿದರು. ಇದಾದ ನಂತರ ವೇದಿಕೆ ಮೇಲೆಯೇ ಮುನಿರತ್ನ ಧರಣಿಗೆ ಕುಳಿತರು.

55
ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಜನತೆಗೆ ಅವಮಾನ

ಇದು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಜನತೆಗೆ ಅವಮಾನ ಮಾಡಲಾಗಿದೆ. ನನಗೆ 15 ವರ್ಷದ ಮೊಮ್ಮಗನಿದ್ದಾನೆ. ಈ ವಯಸ್ಸಿನಲ್ಲಿ ನನ್ನ ಮೇಲೆ ರೇ*ಪ್ ಕೇಸ್ ಹಾಕಿದರು. ಏಯ್ ಕರಿ ಟೋಪಿ, ಬಾರಯ್ಯ ಎಂದು ನನ್ನನ್ನು ಕರೆದು ಅವಮಾನಿಸಿದ್ದಾರೆ. ಆರ್‌ ಆರ್ ನಗರದಲ್ಲಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ಆಕ್ರೋಶ ವ್ಯಕ್ತಪಡಿಸಿದರು.

Read more Photos on
click me!

Recommended Stories