ಬೆಂಗಳೂರಿನ ಸ್ವತಂತ್ರ್ಯ ಉದ್ಯಾನದ ಬಳಿ ನಡೆದ ಪ್ರತಿಭಟನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ.
ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.