ಇದೆಲ್ಲಾ ತೀರ್ಮಾನವಾಗಬೇಕಾದ್ದು ನೀತಿ ಅಯೋಗದಲ್ಲಿ ಅಷ್ಟಕ್ಕೂ ರಾಜ್ಯಸಭೆ, ಲೋಕಸಭೆಯಲ್ಲಿ ಈ ಕುರಿತು ಪ್ರಶ್ನಿಸುವುದನ್ನ ಮಲ್ಲಿಕಾರ್ಜುನ ಖರ್ಗೆ ಬಿಟ್ಟು ಈಗೇಕೆ ರಾಜಕೀಯ ಮಾಡುತ್ತಿದ್ದಾರೆ, ಮುಖ್ಯಮಂತ್ರಿಗಳು ಸಹಾ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದರು. ಸರ್ಕಾರ ನೀತಿ, ನಿಯಮ, ಮೂಲ ಉದ್ದೇಶ ಹಾಗೂ ಮುಂದಿನ ಗುರಿಯನ್ನು ರಾಜ್ಯಪಾಲರು ತಮ್ಮ ಭಾಷಣದಲ್ಲಿ ವಿವರಿಸಬೇಕಿತ್ತು, ಆದರೆ ಭಾಷಣದಲ್ಲಿ ಅಂಥಾದ್ದೆನೂ ಹೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.