ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವರು ಒಂದೆಡೆ ಪ್ರಚಾರ ನಡೆಸುತ್ತಲೇ, ಮತ್ತೊಂದಡೆ ಪಕ್ಷದ ಹಿರಿಯ ಮುಖಂಡರ ನಿವಾಸಗಳಿಗೆ ಭೇಟಿ ನೀಡಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಬೆಳಗ್ಗೆಯೇ ಮಾಜಿ ಮೇಯರ್ ಗೌತಮ್ ಕುಮಾರ್ ಜತೆ ಮತ್ತಿಕೆರೆಗೆ ಆಗಮಿಸಿದ ಅಶ್ವತ್ಥ ನಾರಾಯಣ, ಅಲ್ಲಿನ ಮುತ್ಯಾಲಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕೈಗೊಂಡರು. ತರುವಾಯ ಮುತ್ಯಾಲನಗರ, ಜೆ.ಪಿ.ಪಾರ್ಕ್, ಬಂಡೆಪ್ಪ ಗಾರ್ಡನ್, ಬೃಂದಾವನನಗರದಲ್ಲಿ ಮಾತಯಾಚಿಸಿದರು.
ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವರು ಒಂದೆಡೆ ಪ್ರಚಾರ ನಡೆಸುತ್ತಲೇ, ಮತ್ತೊಂದಡೆ ಪಕ್ಷದ ಹಿರಿಯ ಮುಖಂಡರ ನಿವಾಸಗಳಿಗೆ ಭೇಟಿ ನೀಡಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಬೆಳಗ್ಗೆಯೇ ಮಾಜಿ ಮೇಯರ್ ಗೌತಮ್ ಕುಮಾರ್ ಜತೆ ಮತ್ತಿಕೆರೆಗೆ ಆಗಮಿಸಿದ ಅಶ್ವತ್ಥ ನಾರಾಯಣ, ಅಲ್ಲಿನ ಮುತ್ಯಾಲಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕೈಗೊಂಡರು. ತರುವಾಯ ಮುತ್ಯಾಲನಗರ, ಜೆ.ಪಿ.ಪಾರ್ಕ್, ಬಂಡೆಪ್ಪ ಗಾರ್ಡನ್, ಬೃಂದಾವನನಗರದಲ್ಲಿ ಮಾತಯಾಚಿಸಿದರು.