ಡಿಕೆಶಿ ವಿರುದ್ಧ ಸಾಹುಕಾರ್ ಗಂಭೀರ ಆರೋಪ:
ಗೋಕಾಕ ಕ್ಷೇತ್ರದ ಮಹತ್ವಾಕಾಂಕ್ಷೆಯ ಗಟ್ಟಿ ಬಸವಣ್ಣ ಏತನೀರಾವರಿ ಯೋಜನೆಗೆ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ(Basavaraj bommai) ಗೋಕಾಕ ನಗರಕ್ಕೆ ಆಗಮಿಸಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದ್ದರು. ಕಾಂಗ್ರೆಸ್ ಸರ್ಕಾರ ಬಂದ ನಂತರ ಈಗಿನ ಜಲಸಂಪನ್ಮೂಲ ಸಚಿವರು ಈ ಯೋಜನೆಯನ್ನು ತಡೆ ಹಿಡಿದಿದ್ದಾರೆ. ನನ್ನ ಕ್ಷೇತ್ರದ ನೀರಾವರಿ ಯೋಜನೆಗೆ ಅಡ್ಡಗಾಲು ಹಾಕಲಾಗುತ್ತಿದೆ ಎಂದು ರಮೇಶ ಆರೋಪಿಸಿದರು.
ಈ ಯೋಜನೆಯನ್ನು ಸ್ಥಗಿತಗೊಳಿಸಿದ್ದರೆ ನಾನು ಡಿಕೆಶಿ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದೆ. ಆದರೆ ತಡೆಹಿಡಿದಿರುವುದು ಗೊತ್ತಾಗಿದೆ. ಈ ಯೋಜನೆ ಜಾರಿಯಾದ್ರೆ ಎಲ್ಲರಿಗೂ ಒಳ್ಳೆಯದಾಗುತ್ತದೆ. ಇಲ್ಲವಾದರೆ ದೇವರ ಆಶೀರ್ವಾದದಿಂದ ಇನ್ನೆನೋ ಆಗಲಿದೆ. ಸಿದ್ದರಾಮಯ್ಯ ಸಿಎಂ ಆಗಿದಕ್ಕೆ ನಮ್ಮ ಕೆಲಸ ಸ್ಲೋ ಆಗಿದೆ ಎಂದು ಸರ್ಕಾರ ಪತನದ ಕಾರ್ಯಚಟುವಟಿಕೆಗಳ ಬಗ್ಗೆ ಬಹಿರಂಗ ಸಮಾವೇಶದಲ್ಲಿ ರಮೇಶ ಜಾರಕಿಹೊಳಿ ರಿವಿಲ್ ಮಾಡಿದರು.