ಎಸ್ಆರ್ ವಿಶ್ವನಾಥ್ ಬಿಜೆಪಿಯ ಯಲಹಂಕ ಶಾಸಕ, ಇನ್ನು ಬೈರತಿ ಸುರೇಶ್ ಪಕ್ಕದ ಹೆಬ್ಬಾಳ ಕ್ಷೇತ್ರದ ಶಾಸಕ. ವಿಶ್ವನಾಥ್ ಅವರ ಪುತ್ರಿ ಅಪೂರ್ವ ಹಾಗೂ ಬೈರತಿ ಸುರೇಶ್ ಪುತ್ರ ಸಂಜಯ್ ಅವರು ಲವ್ ಕಮ್ ಅರೇಂಜ್ಡ್ ಮ್ಯಾರೇಜ್ ಆಗಿದ್ದಾರೆ. ಬುಧವಾರ ಇವರ ಎಂಗೇಜ್ಮೆಂಟ್ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದಿದೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇಬ್ಬರು ರಾಜಕೀಯ ನಾಯಕರ ಆಪ್ತರು ಆಗಮಿಸಿ ಜೋಡಿಗೆ ಶುಭ ಹಾರೈಸಿದ್ದಾರೆ.