ಸಿದ್ದರಾಮಯ್ಯ ಅವರು ಅಭಿವೃದ್ಧಿ ಕುರಿತು ಸವಾಲು ಹಾಕುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರೇ ರೈತರು ಹೊಲ ಗದ್ದೆಗಳಿಗೆ ರಸ್ತೆ ಕೇಳಿದರೆ, ಗ್ಯಾರಂಟಿ ನಿಲ್ಲಿಸುವುದಾಗಿ ಹೆದರಿಸುತ್ತಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನವೆಂಬರ್ ಪೂರ್ವದಲ್ಲಿ ಪತನಗೊಳ್ಳಲಿದೆ. ಈಗಾಗಲೇ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಉದ್ಭವಿಸಿದೆ ಎಂದರು. ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ ಅವರು ಮುಖ್ಯಮಂತ್ರಿಗೆ ಲಾಟರಿ ಸಿಎಂ ಎಂದು ಹೇಳಿದ್ದಾರೆ. ಇದಕ್ಕಿಂತ ವಿರೋಧ ಪಕ್ಷದವರು ಏನು ಹೇಳುವುದೂ ಬೇಕಾಗಿಲ್ಲ ಎಂದರು.