ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ ಸಿದ್ದರಾಮಯ್ಯ

Published : Mar 13, 2024, 08:23 AM IST

ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ, ಸಂಸದ ಅನಂತ ಕುಮಾರ್ ಹೆಗಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

PREV
15
ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ (ಮಾ.13): ಸಂವಿಧಾನ ಬದಲಿಸುವುದು ಬಿಜೆಪಿ ಹಿಡನ್ ಅಜೆಂಡಾ, ಸಂಸದ ಅನಂತ ಕುಮಾರ್ ಹೆಗಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರ ತಾಲೂಕಿನ ಹೆಗ್ಗವಾಡಿಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿ, ಅನಂತಕುಮಾರ್ ಹೆಗ್ಡೆ ಆರ್ಡಿನರಿ ವ್ಯಕ್ತಿ ಅಲ್ಲಾ, 5 ಸಲ ಸಂಸದರಾಗಿದ್ದವರು, ಸಚಿವರಾಗಿದ್ದವರು, ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗತ್ತಾ, ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡರಾ ಎಂದು ಪ್ರಶ್ನೆ ಮಾಡಿದರು.

25

ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು, ಸಂವಿಧಾನ ಜಾರಿಯಾದ ದಿನದಿಂದಲೂ ಅವರು ಸಂವಿಧಾನ ವಿರೋಧ ಮಾಡಿಕೊಂಡೇ ಬಂದಿದ್ದಾರೆ, ಈಗ ಅನಂತ ಕುಮಾರ್ ಹೆಗ್ಡೆ ಮೂಲಕ ಹೇಳಿಸುತ್ತಿದ್ದಾರೆ ಎಂದರು. ಸಿಎಎ ಚುನಾವಣಾ ಸಂದರ್ಭದಲ್ಲಿ ಏಕೆ ಜಾರಿ ಮಾಡಬೇಕಿತ್ತು? ಧರ್ಮದ ಆಧಾರದ ಮೇಲೆ ಪೌರತ್ವ ಕೊಡಲು ನಮ್ಮ ವಿರೋಧವಿದೆ, ಎಂದು ಸಿಎಎ ಜಾರಿಗೆ ಅಸಮಾಧಾನ ವ್ಯಕ್ತಪಡಿಸಿದರು.

35

ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂಬ ಆರ್.ಆಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿ, ಯಾರಾದರೂ ಕದ್ದು ಮುಚ್ಚಿ ನೀರು ಬಿಡುತ್ತಾರಾ? ನೀರು ಇದ್ದರಲ್ಲವಾ ಬಿಡೋದು? ಅವರು ಹೇಳುವುದು ಸುಳ್ಳು, ತಮಿಳುನಾಡಿಗೆ ತೊಟ್ಟು ನೀರು ಕೊಡುವುದಿಲ್ಲ, ಕುಡಿಯಲು ನೀರು ಇಟ್ಟುಕೊಳ್ಳದೇ ನಾವು ಕೊಡುವುದಿಲ್ಲ, ಅವರು ನೀರು ಕೊಡಿ ಎಂದು ಕೇಳೂ ಇಲ್ಲಾ ಸುಮ್ಮಸುಮ್ಮನೇ ಯಾಕೆ ನೀರು ಕೊಡುತ್ತೇವೆ? 

45

ತಮಿಳುನಾಡಿಗೆ ನೀರು ಕೊಡುವ ಪ್ರಶ್ನೆಯೇ ಇಲ್ಲಾ, ತಮಿಳುನಾಡು ಕೇಳಿದರೂ ನೀರು ಕೊಡಲ್ಲ, ಕೇಂದ್ರ ಹೇಳಿದರು ನೀರು ಕೊಡಲ್ಲ, ಯಾರೂ ಹೇಳಿದರು ನೀರು ಕೊಡಲ್ಲ ಎಂದರು. ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ, ಯದುವೀರ್ ಆಗುವುದು.
 

55

ಮಾಧ್ಯಮವರು ಸೃಷ್ಟಿ ಮಾಡಿಕೊಂಡು ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ ಎಂದು ಕಿಡಿಕಾರಿದರು. ತಾನು ಎಂಪಿಯಾದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿ, ಎರಡು ಸಾರಿ ಎಂಪಿ ಆಗಿದ್ದಾರಲ್ಲ ನನ್ನ ಕುರ್ಚಿ ಅಲುಗಾಡಲೇ ಇಲ್ಲಾ, ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories