ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ನಡ್ಡಾ ಭೇಟಿ ಬಳಿಕ ಸಿಎಂ ಹೇಳಿದ್ದು ಹೀಗೆ...!

First Published Nov 18, 2020, 6:30 PM IST

ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ವಿಚಾರವಾಗಿ ಇಂದು (ಬುಧವಾರ) ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿದರು. ಈ ವೇಳೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೇ ತಮ್ಮ ಫಾರ್ಮುಲಾವನ್ನ ನಡ್ಡಾ  ಮುಂದಿಟ್ಟಿದ್ದಾರೆ. ಆದ್ರೆ, ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ. ಹಾಗಾದ್ರೆ, ನಡ್ಡಾ ಏನಂದ್ರು..? ಏನೆಲ್ಲಾ ಮಾತುಕತೆಗಳಾದವು ಎನ್ನುವ ಸಂಪೂರ್ಣ ಮಾಹಿತಿಯನ್ನು ಸ್ವತಃ ಬಿಎಸ್‌ವೈ ಮಾಧ್ಯಮಗಳ ಮುಂದೆ ಬಿಚ್ಚಿಟ್ಟರು. 

ಸಂಪುಟ ವಿಸ್ತರಣೆ ವಿಚಾರವಾಗಿ ಇಂದು (ಬುಧವಾರ) ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿದರು.
undefined
ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಿಎಸ್‌ವೈ ಹಾಗೂ ಡಿಸಿಎಂ ಗೋವಿಂದ್ ಕಾರಜೋಳ ಅವರು ಜೆಪಿ ನಡ್ಡಾ ಜೊತೆಚರ್ಚೆ ನಡೆಸಿದರು.
undefined
ಹಾಗಾದ್ರೆ, ನಡ್ಡಾ ಏನಂದ್ರು..? ಏನೆಲ್ಲಾ ಮಾತುಕತೆಗಳಾದವು ಎನ್ನುವ ಸಂಪೂರ್ಣ ಮಾಹಿತಿಯನ್ನು ಸ್ವತಃ ಬಿಎಸ್‌ವೈ ಮಾಧ್ಯಮಗಳ ಮುಂದೆ ಬಿಚ್ಚಿಟ್ಟರು.
undefined
ಸಂಪುಟ ವಿಸ್ತರಣೆ ಬಗ್ಗೆ ನಾಯಕರೊಂದಿಗೆ ಚರ್ಚೆ ಮಾಡಿದ್ದೇನೆ.. ಇನ್ನು ಎರಡು ಮೂರು ದಿನಗಳಲ್ಲಿ ಇದರ ಬಗ್ಗೆ ಚರ್ಚೆ ಮಾಡಿ ನಿಮಗೆ ಹೇಳುತ್ತೇನೆ ಎಂದಿದ್ದಾರೆ ಎಂದು ಬಿಎಸ್‌ವೈ ಮಾಧ್ಯಮಗಳ ಮುಂದೆ ಹೇಳಿದರು.
undefined
ಇನ್ನು ಸಂಪುಟ ವಿಸ್ತರಣೆಯೋ ಪುನಾರಚನೆಯೋ ಎಂಬ ಪ್ರಶ್ನೆಗೆ ಉತ್ತರಿಸಿ ನೋಡೋಣ ನಡ್ಡಾ ಅವರು ಮುಂದಿನ ದಿನಗಳಲ್ಲಿ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿದರು.
undefined
ಒಟ್ಟಿನಲ್ಲಿ ನಡ್ಡಾ ಅವರ ಭೇಟಿ ಯಡಿಯೂರಪ್ಪನವರಿಗೆ ಫಲ ನೀಡಿಲ್ಲ. ಇದರಿಂದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ. ಅಲ್ಲದೇ ಬಿಎಸ್‌ವೈ ಸಹ ಬರಿಗೈಯಿಂದ ವಾಪಸ್ ನಡೆದರು.
undefined
click me!