ಬೆಂಗಳೂರು (ಮಾ.25): ‘ನಾವು ನಮ್ಮ 5 ಗ್ಯಾರಂಟಿಗಳಿಗೆ ಹಣ ಕೇಳುತ್ತಿಲ್ಲ. ನಮ್ಮ ಬಜೆಟ್ನಲ್ಲೇ ಗ್ಯಾರಂಟಿಗಳಿಗೆ ಸಾಕಷ್ಟು ಹಣ ನಿಗದಿ ಮಾಡಿದ್ದೇವೆ. ನಿಮ್ಮ ಕೇಂದ್ರ ಬಜೆಟ್ ಹಾಗೂ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ತಿಳಿಸಿದ್ದ ರಾಜ್ಯದ ಪಾಲನ್ನು ಕೇಳುತ್ತಿದ್ದೇವೆಯೇ ಹೊರತು ನಿಮ್ಮ ಬಳಿ ಕನ್ನಡಿಗರು ಭಿಕ್ಷೆ ಬೇಡುತ್ತಿಲ್ಲ’ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.