ಅಹೋರಾತ್ರಿ ಧರಣಿಯಲ್ಲಿ ವಿಧಾನಸಭೆಯ ಒಟ್ಟು 69 ಜನ ಕಾಂಗ್ರೆಸ್ ಸದಸ್ಯರ ಪೈಕಿ ಸಿದ್ದರಾಮಯ್ಯ, ಯು.ಟಿ.ಖಾದರ್, ಡಿ.ಕæ.ಶಿವಕುಮಾರ್ ಸೇರಿದಂತೆ 33 ಸದಸ್ಯರು ಮಾತ್ರ ಭಾಗವಹಿಸಿದ್ದರು. ಇನ್ನು ವಿಧಾನ ಪರಿಷತ್ನ 26 ಸದಸ್ಯರ ಪೈಕಿ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್, ಪ್ರಕಾಶ್ ರಾಥೋಡ್, ಗೋವಿಂದರಾಜು ಸೇರಿದಂತೆ ಒಟ್ಟು 17 ಮಂದಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.