ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಾಯಕನಿಗೆ ಟಿಕೆಟ್, ಬಿ-ಫಾರಂ ಕೊಟ್ಟ ಡಿಕೆಶಿ

First Published Oct 7, 2020, 2:22 PM IST

ಪ್ರಸ್ತುತ ರಾಜ್ಯದಲ್ಲಿ ಬೆಂಗಳೂರಿನ ಆರ್‌.ಆರ್.ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಮತ್ತೊಂದೆಡೆ ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಪ್ರಕಟವಾಗಿದೆ. ಇದರ ಮಧ್ಯೆ ಜೆಡಿಎಸ್‌ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಾಯಕನಿಗೆ ಟಿಕೆಟ್ ನೀಡಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಬಿ-ಫಾರಂ ವಿತರಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯಗೆ "ಬಿ" ಫಾರಂ
undefined
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರಿಗೆ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎಂದು ಬೆಂಗಳೂರಿನಲ್ಲಿ ಬುಧವಾರ"ಬಿ" ಫಾರಂ ನೀಡಿದರು.
undefined
ನಂತರ ಶಿವಕುಮಾರ್ ಹಾಗೂ ಪರಮೇಶ್ವರ ಅವರ ಸಮ್ಮುಖದಲ್ಲಿ ರಮೇಶ್ ಬಾಬು ಅವರು ಶಾಂತಿನಗರದಲ್ಲಿ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ನವೀನ್ ಕುಮಾರ್ ಸಿಂಗ್ ಅವರಿಗೆ ನಾಮಪತ್ರ ಸಲ್ಲಿಸಿದರು.
undefined
ಜೆಡಿಎಸ್ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲು ಸಿದ್ಧತೆ ನಡೆಸುತ್ತಿದೆ, ಕಳೆದ ಬಾರಿ ಬಿಜೆಪಿಯ ಡಾ.ಶಿವಯೋಗಿಸ್ವಾಮಿ ಅವರನ್ನು ಸೋಲಿಸಿದ್ದ ಚೌಡರೆಡ್ಡಿ ತೋಪಳ್ಳಿ ಅವರನ್ನು ಕಣಕ್ಕಿಳಿಸಲಿದೆ, ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನ ರಮೇಶ್ ಬಾಬು ಅಭ್ಯರ್ಥಿಯಾಗಿದ್ದಾರೆ.
undefined
ವಿಧಾನ ಪರಿಷತ್‌ ಚುನಾವಣೆಯಲ್ಲಿ ತಮಗೆ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ರಮೇಶ್‌ ಬಾಬು ಕೆಲ ಸಮಯದ ಹಿಂದೆ ಜೆಡಿಎಸ್‌ ತೊರೆದಿದ್ದರು
undefined
click me!