Published : Jul 18, 2022, 06:12 PM ISTUpdated : Jul 18, 2022, 07:30 PM IST
ಭಾರತದ 16ನೇ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷ ಯುಪಿಎ ಮೈತ್ರಿಕೂಟದಿಂದ ಹಿರಿಯ ರಾಜಕಾರಣಿ ಯಶವಂತ್ ಸಿನ್ಹಾ ಸ್ಪರ್ಧೆಗೆ ಇಳಿದಿದ್ದಾರೆ. ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು(ಸೋಮವಾರ) ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನ ನಡೆಯಿತು. ಈ ಸಂದರ್ಭದಲ್ಲಿ ಇಬ್ಬರು ಮಾಜಿ ಪ್ರಧಾನಿಗಳು ವ್ಹೀಲ್ ಚೇರ್ ಮೂಲಕ ಬಂದು ಮತ ಹಾಕಿದರು.
ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು(ಸೋಮವಾರ) ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನ ನಡೆಯಿತು.
211
ದೇಶದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 2017ರ ಜುಲೈ 25ರಂದು ಅಧಿಕಾರ ವಹಿಸಿಕೊಂಡಿದ್ದು, ಇದೇ ಜುಲೈ 24ರ 2022ರಂದು ಇವರ ಅಧಿಕಾರವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆ ತೆರವು ಆಗಲಿರುವ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು.
311
90 ವರ್ಷದ ಎಚ್ಡಿ ದೇವೇಗೌಡ ಅವರಿಗೆ ಇತ್ತೀಚೆಗೆ ಆರೋಗ್ಯ ಸರಿ ಇರಲಿಲ್ಲ. ಇದರಿಂದ ಅವರು ವಿಶ್ರಾಂತಿಯಲ್ಲಿದ್ದರು. ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವ್ಹೀಲ್ ಚೇರ್ನಲ್ಲಿ ಬಂದು ತಮ್ಮ ಹಕ್ಕು ಚಲಾಯಿಸಿದರು.
411
ಇನ್ನೂ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು.
511
ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸಂಸತ್ ಭವನಕ್ಕೆ ಬಂದು ಮತ ಹಾಕಿದರು.
611
ಮನಮೋಹನ್ ಸಿಂಗ್ ಅವರು ವ್ಹೀಲ್ ಚೇರ್ನಲ್ಲಿ ಬಂದಿರುವ ವಿಡಿಯೋ ವೈರಲ್ ಆಗಿದ್ದು, ವೀಡಿಯೋವನ್ನು ಕಾಂಗ್ರೆಸ್ನ ಅನೇಕ ನಾಯಕರು ಹಂಚಿಕೊಂಡಿದ್ದು, ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ. ಅವರನ್ನು ಈ ರೀತಿ ನೋಡಲು ಬೇಸರವಾಗಿದೆ ಎಂದಿದ್ದಾರೆ.
711
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಈಗ 90 ವರ್ಷ. ಆದರೂ ಸಹ ಅವರು ಪಕ್ಷ ಸಂಘಟನೆ ಅಂತ ಓಡಾಡುತ್ತಲೇ ಇರುತ್ತಾರೆ. ಆದ್ರೆ, ಇದುವರೆಗೂ ಅವರು ಸಾರ್ವಜನಿಕವಾಗಿ ವ್ಹೀಲ್ ಚೇರ್ ಬಳಸಿಲ್ಲ.ರಾಷ್ಟ್ರಪತಿ ಚುನಾವಣೆಗೆ ಮತ ಹಾಕಲು ಇದೇ ಮೊದಲ ಬಾರಿಗೆ ದೇವೇಗೌಡ ಅವರು ಸಾರ್ವಜನಿಕವಾಗಿ ವ್ಹೀಲ್ ಚೇರ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತಮ್ಮ ಸಹಾಯಕ ಸಹಾಯ ಪಡೆದುಕೊಳ್ಳುತ್ತಾರೆ. ಆದ್ರೆ, ವ್ಹೀಲ್ ಚೇರ್ ಉಪಯೋಗಿಸಿರಲಿಲ್ಲ.
811
ದೇವೇಗೌಡರ ಜೊತೆ ಮಾಜಿ ಸಚಿವ ಹಾಗೂ ಅವರ ಪುತ್ರ ಎಚ್ಡಿ ರೇವಣ್ಣ ಸಹ ಆಗಮಿಸಿ ಮತ ಹಾಕಿದರು. ಎನ್ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಘೋಷಿಸಿತ್ತು.
911
ಇಂದು(ಸೋಮವಾರ) ಬೆಳಗ್ಗೆ 10 ಗಂಟೆಯಿಂದಲೇ ಆರಂಭವಾದ ರಾಷ್ಟ್ರಪತಿ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
1011
ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷ ಯುಪಿಎ ಮೈತ್ರಿಕೂಟದಿಂದ ಹಿರಿಯ ರಾಜಕಾರಣಿ ಯಶವಂತ್ ಸಿನ್ಹಾ ಸ್ಪರ್ಧೆಗೆ ಇಳಿದಿದ್ದಾರೆ.
1111
ರಾಷ್ಟ್ರಪತಿ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.