ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ: ಯಾರಿಗೆ ಯಾವ ಜಿಲ್ಲೆ?

Published : Feb 25, 2021, 05:48 PM IST

ರಾಜ್ಯ ಬಿಜೆಪಿ ಬುಧವಾರ ಅಷ್ಟೇ ಹತ್ತು ವಕ್ತಾರರನ್ನು ನೇಮಕಗೊಳಿಸಿದ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ  ಜವಾಬ್ದಾರಿ ನೀಡಿ ಆದೇಶಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಗುರುವಾರ) ಆದೇಶ ಹೊರಡಿಸಿದ್ದು, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ, ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಧ್ರುವನಾರಾಯಣ್ ಅವರಿಗೆ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದ್ದಾರೆ. ಯಾರಿಗೆ ಯಾವ ಜಿಲ್ಲೆಯ ಹೊಣೆ ಎನ್ನುವ ಮಾಹಿತಿ ಇಲ್ಲಿದೆ.

PREV
16
ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ  ಜವಾಬ್ದಾರಿ: ಯಾರಿಗೆ ಯಾವ ಜಿಲ್ಲೆ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕೆಪಿಸಿಸಿಯ 5 ಕಾರ್ಯಾಧ್ಯಕ್ಷರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದ್ದಾರೆ.

26

ಈಶ್ವರ್ ಖಂಡ್ರೆ- ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ.

ಈಶ್ವರ್ ಖಂಡ್ರೆ- ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ.

36

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

ಸತೀಶ್ ಜಾರಕಿಹೊಳಿ-ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲೆ.

46

ಸಲೀಂ ಅಹ್ಮದ್- ಗದಗ, ಹಾವೇರಿ, ಚಿತ್ರದುರ್ಗ, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹೊಣೆ ವಹಿಸಲಾಗಿದೆ.

ಸಲೀಂ ಅಹ್ಮದ್- ಗದಗ, ಹಾವೇರಿ, ಚಿತ್ರದುರ್ಗ, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹೊಣೆ ವಹಿಸಲಾಗಿದೆ.

56

ರಾಮಲಿಂಗರೆಡ್ಡಿ- ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ,  ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ರಾಮಲಿಂಗರೆಡ್ಡಿ- ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ,  ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

66

ಧ್ರುವನಾರಾಯಣ್-ಶಿವಮೊಗ್ಗ, ಉಡುಪಿ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ನಗರ, ಗ್ರಾಮಾಂತರ, ಚಾಮರಾಜನಗರ, ಕೊಡಗು ಜಿಲ್ಲಾ ಉಸ್ತುವಾರಿ. 

ಧ್ರುವನಾರಾಯಣ್-ಶಿವಮೊಗ್ಗ, ಉಡುಪಿ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ನಗರ, ಗ್ರಾಮಾಂತರ, ಚಾಮರಾಜನಗರ, ಕೊಡಗು ಜಿಲ್ಲಾ ಉಸ್ತುವಾರಿ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories